Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಒಂದೇ ಮಣ್ಣಿನ ಮುದ್ದೆಯಿಂದ ಎರಡು ಕುಡಿಕೆಗಳನ್ನು ಅಂದರೆ ಒಂದನ್ನು ವಿಶೇಷ ಬಳಕೆಗೂ ಇನ್ನೊಂದನ್ನು ಸಾಮಾನ್ಯ ಬಳಕೆಗೂ ಮಾಡುವ ಅಧಿಕಾರ ಕುಂಬಾರನಿಗೆ ಇಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮುದ್ದೆಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕುಂಬಾರನು ತನಗೆ ಇಷ್ಟಬಂದಂತೆ ಒಂದೇ ಮಣ್ಣಿನಿಂದ ವಿವಿಧ ವಸ್ತುಗಳನ್ನು ತಯಾರಿಸುವುದಿಲ್ಲವೇ? ಅವನು ಒಂದನ್ನು ವಿಶೇಷವಾದ ಬಳಕೆಗಾಗಿಯೂ ಮತ್ತೊಂದನ್ನು ದೈನಂದಿನ ಬಳಕೆಗಾಗಿಯೂ ತಯಾರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕುಂಬಾರನಿಗೆ ಒಂದೇ ಮಣ್ಣಿನ ರಾಶಿಯಿಂದ ಒಂದನ್ನು ಉತ್ತಮವಾದ ಪಾತ್ರೆಯನ್ನಾಗಿಯೂ ಮತ್ತೊಂದನ್ನು ಸಾಮಾನ್ಯವಾದ ಪಾತ್ರೆಯನ್ನಾಗಿಯೂ ಮಾಡುವ ಅಧಿಕಾರ ಇಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಗಾಡ್ಗಿ ಕರ್‍ತಲ್ಯಾ ಕುಂಬಾರಾಕ್ ತೆನಿ ಕರ್‍ತಲೆ ಗಾಡ್ಗೆ ಅಪ್ನಾಚ್ಯಾ ಮನಾಕ್ ಯೆತಾ ತಸೆ ಕರ್‍ತಲೊ ಹಕ್ಕ್ ಹಾಯ್, ಅನಿ ದೊನ್ ಗಾಡ್ಗಿ ಎಕುಚ್ ಚಿಕ್ಲಾಚ್ಯಾ ಮುದ್ದ್ಯಾನ್, ಎಕ್ ಬರ್‍ಯಾ ಕಾಮಾಕ್ ವಾಪರ್ತಲೆ, ಅನಿ ಅನಿಎಕ್ ಸಾದಾರನ್ ಕಾಮಾಕ್ ವಾಪರ್ತಲೆ ಅಶೆ ದೊನ್ ಗಾಡ್ಗಿ ಕರ್‍ತಲೊಬಿ ಹಕ್ಕ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:21
13 ತಿಳಿವುಗಳ ಹೋಲಿಕೆ  

ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.


ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.


ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.


ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.


ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡವಾದ ಪಾತ್ರೆಯಂತಿದೆ.


ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?


ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು