Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ - “ಸರ್ವಶಕ್ತ ಸರ್ವೇಶ್ವರ ನಮ್ಮ ಸಂತತಿಯಲ್ಲಿ ಕೆಲವರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ಗತಿಯೇ ನಮ್ಮದಾಗುತ್ತಿತ್ತು,” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸೇನಾಧೀಶ್ವರನಾದ ಕರ್ತನು ನಮಗೆ ಸಂತಾನವನ್ನು ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು, ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಶಾಯನು ಹೇಳಿರುವುದೇನೆಂದರೆ: “ಪ್ರಭುವು ಸರ್ವಶಕ್ತನಾಗಿದ್ದಾನೆ. ಪ್ರಭುವು ತನ್ನ ಜನರಲ್ಲಿ ಕೆಲವರನ್ನು ನಮಗೋಸ್ಕರವಾಗಿ ರಕ್ಷಿಸಿದ್ದಾನೆ. ಆತನು ಹೀಗೆ ಮಾಡಿಲ್ಲದಿದ್ದರೆ, ಈಗ ನಾವು ಸೊದೋಮಿನಂತೆಯೂ ಗೊಮೋರದಂತೆಯೂ ಇರುತ್ತಿದ್ದೆವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಶಾಯನು ಈ ಹಿಂದೆ, “ಸೇನಾಧೀಶ್ವರರಾದ ದೇವರು ನಮಗೆ ಸಂತತಿಯನ್ನು ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರದ ಹಾಗೆ ಇರುತ್ತಿದ್ದೆವು.” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಹೆಚ್ ತೆ ಇಸಾಯಿಯಾ ಪ್ರವಾದ್ಯಾನ್ ಅದ್ದಿ ಸಾಂಗಲ್ಲೆ ಸರ್ವೆಸ್ವರಾನ್ ಸಗ್ಳ್ಯಾನ್ಕಿ ಮೊಟ್ಯಾ ದೆವಾನ್ ಅಮ್ಚೆ ಸಾಟ್ನಿ ಮನುನ್ ಉಲ್ಲ್ಯಾ ಅಮ್ಚ್ಯಾ ಘರಾನ್ಯಾಚ್ಯಾ ಲೊಕಾಕ್ನಿ ಹುರ್‍ವಿನಸಿ ಹೊತ್ತ್ಯಾನ್ ತರ್, ಅಮಿಬಿ ಸೊದೊಮ್ ಶಾರಾಚ್ಯಾ ಅನಿ ಗೊಮೊರಾ ಶಾರಾಚ್ಯಾ ಸರ್ಕೆ ಹೊವ್ನ್ ರ್‍ಹಾಯ್ ಹೊತ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:29
15 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.


“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.


ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.


ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.


ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.


ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.


ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,


ಸಮುದ್ರ ತೀರದ ಆ ಪ್ರಾಂತ್ಯವು ಹುಲ್ಲುಗಾವಲಾಗಿ, ಕುರುಬರ ಗುಡಿಸಲಾಗಿ, ಹಿಂಡುಗಳ ದೊಡ್ಡಿಗಳು ಇವೇ ಅಲ್ಲಿರುವವು.


ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.


ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.


ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು