Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:65 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

65 ನೆರೆಹೊರೆಯವರೆಲ್ಲರೂ ತಲ್ಲಣಗೊಂಡರು. ಈ ಸಮಾಚಾರ ಜುದೇಯದ ಗುಡ್ಡಗಾಡು ಪ್ರಾಂತ್ಯದಲ್ಲೆಲ್ಲಾ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

65 ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು; ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ಇದನ್ನು ಕೇಳಿ ನೆರೆಹೊರೆಯವರಿಗೆಲ್ಲಾ ಭಯವಾಯಿತು. ಜುದೇಯದ ಗುಡ್ಡಪ್ರದೇಶದಲ್ಲೆಲ್ಲಾ ಈ ಸಂಗತಿಗಳ ಬಗ್ಗೆ ಜನರು ಮಾತನಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ಈ ಘಟನೆಯಿಂದ ಸುತ್ತಲೂ ವಾಸಮಾಡುತ್ತಿದ್ದವರೆಲ್ಲರಿಗೆ ಭಯವುಂಟಾಯಿತು, ಯೂದಾಯದ ಬೆಟ್ಟದ ಪ್ರಾಂತದಲ್ಲೆಲ್ಲಾ ಈ ಸಂಗತಿಗಳನ್ನು ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

65 ಹೆ ಆಯ್ಕಲ್ಲಿ ಅಜು ಬಾಜುಚಿ ಲೊಕಾ ಭಿಂಯಾನ್ ಭರ್‍ಲಿ,ಅನಿ ಹಿ ಖಬರ್ ಜುದೆಯಾಚ್ಯಾ ಮಡ್‍ಯಾಂಚ್ಯಾ ಜಾಗ್ಯಾರ್ ಸಗ್ಳ್ಯಾಕ್ಡೆ ಫರ್ಗಟ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:65
12 ತಿಳಿವುಗಳ ಹೋಲಿಕೆ  

ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು.


ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು.


ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.


ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು.


ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು, ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು.


ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.


ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್‍ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.


ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡದೆ, ಬೇಗನೆ ಬಂದು ಸಹಾಯಮಾಡಿ ನಮಗೆ ವಿರೋಧವಾಗಿ ಸೇರಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿರಿ” ಎಂದು ಬೇಡಿಕೊಂಡರು.


ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು.


ಅದನ್ನು ಕೇಳಿದವರೆಲ್ಲರೂ, ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು