Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಶೀರ್ವಾದಪಾತ್ರನು ಅಲ್ಲಿ ಇದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನಿಲ್ಲುವದು; ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಮನೆಯಲ್ಲಿ ಶಾಂತಸ್ವಭಾವದ ಮನುಷ್ಯನಿದ್ದರೆ, ನಿಮ್ಮ ಆಶೀರ್ವಾದ ಅವನಿಗೆ ದೊರೆಯುವುದು. ಅವನು ಶಾಂತಸ್ವಭಾವದವನಾಗಿಲ್ಲದಿದ್ದರೆ ನಿಮ್ಮ ಆಶೀರ್ವಾದ ನಿಮಗೇ ಹಿಂತಿರುಗಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿ ಸಮಾಧಾನದ ಮನುಷ್ಯನು ಇದ್ದರೆ, ನಿಮ್ಮ ಸಮಾಧಾನವು ಅವನ ಮೇಲೆ ಇರುವುದು; ಇಲ್ಲದಿದ್ದರೆ, ಅದು ನಿಮಗೇ ಹಿಂದಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜರ್ ಸಮಾದಾನಾಚೊ, ಪ್ರೆಮಾಚೊ ಮಾನುಸ್ ಥೈ ರ್‍ಹಾಲ್ಯಾರ್, ತುಮಿ ಸಾಂಗಲ್ಲೆ ಸಮಾದಾನ್ ತೆಚ್ಯಾ ವಾಂಗ್ಡಾ ರಾವ್ಕ್ ಸೊಡಾ; ನಸ್ಲ್ಯಾರ್, ತುಮ್ಚೆ ಸಮಾದಾನ್ ಫಾಟಿ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:6
11 ತಿಳಿವುಗಳ ಹೋಲಿಕೆ  

ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.


ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.


ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.


ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.


ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,


ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ.


ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು