Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ, ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ನಿನ್ನ ಕಣ್ಣೇ ದೇಹಕ್ಕೆ ದೀಪ; ನಿನ್ನ ಕಣ್ಣು ಸರಿಯಿದ್ದರೆ ನಿನ್ನ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ, ದೇಹವೆಲ್ಲಾ ಕತ್ತಲೆಮಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ; ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವದು. ಆದದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಿನ್ನ ಕಣ್ಣು ದೇಹಕ್ಕೆ ಬೆಳಕಾಗಿದೆ, ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣ ಬೆಳಕಾಗಿರುವುದು. ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣಕತ್ತಲಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ. ಆದ್ದರಿಂದ ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು. ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವು ಸಹ ಕತ್ತಲೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತುಮ್ಚೆ ಡೊಳೆ ತುಮ್ಚ್ಯಾ ಆಂಗಾಚೆ ದಿವೆ. ಕನ್ನಾ ತುಜೆ ಡೊಳೆ ಸಮಾ ಹಾತ್ ತನ್ನಾ ತುಜ್ಯಾ ಸಗ್ಳ್ಯಾ ಆಂಗಾಕ್ ಉಜ್ವೊಡ್ ರ್‍ಹಾತಾ.ಕನ್ನಾ ತುಮ್ಚೆ ಡೊಳೆ ಸಮಾ ನಾತ್, ತನ್ನಾ ತುಮ್ಚೆ ಸಗ್ಳೆ ಆಂಗುಚ್ ಕಾಳ್ಕಾತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:34
28 ತಿಳಿವುಗಳ ಹೋಲಿಕೆ  

ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.


ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


“ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.”


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ಕಣ್ಣಿದ್ದು ಕಾಣುವುದಿಲ್ಲವೋ? ಕಿವಿಯಿದ್ದು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ?


ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.


ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.


ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.


ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.


ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.


ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.


ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.


ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.


ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು?


ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.


ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು.


ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.


ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!


ಆದುದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು