Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆದರೆ ಕರ್ತನು ಅವನಿಗೆ, “ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆಗ ಯೇಸು, “ಫರಿಸಾಯರಾದ ನೀವು ಲೋಟ ಹಾಗೂ ಊಟದ ತಟ್ಟೆಗಳ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಲೋಭದಿಂದಲೂ ಕೆಡುಕಿನಿಂದಲೂ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಸ್ವಾವಿುಯು ಅವನಿಗೆ - ಫರಿಸಾಯರಾದ ನೀವು ಪಂಚಪಾತ್ರೆ ಬಟ್ಟಲು ಇವುಗಳ ಹೊರ ಭಾಗವನ್ನು ಶುಚಿಮಾಡುತ್ತೀರಿ ಸರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಪ್ರಭುವು (ಯೇಸು) ಅವನಿಗೆ ಹೇಳಿದ್ದೇನೆಂದರೆ: “ಫರಿಸಾಯರಾದ ನೀವು ಪಾತ್ರೆಯ ಮತ್ತು ಬಟ್ಟಲಿನ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ನಿಮ್ಮ ಒಳಭಾಗವು ಮೋಸದಿಂದಲೂ ಕೆಟ್ಟತನದಿಂದಲೂ ತುಂಬಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಗ ಕರ್ತದೇವರು ಅವನಿಗೆ, “ಫರಿಸಾಯರಾದ ನೀವು, ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತನ್ನಾ ಜೆಜುನ್ ತುಮ್ಚಿ ವಾಟ್ಕಿ ಆಯ್ದಾನಾ ಪವಿತ್ರ್ ಹಾತ್, ಖರೆ ಭುತ್ತುರ್ನಾ ತುಮಿ ಸಗ್ಳೆ ಹಾಳ್ ಕರ್‍ತಲಿ, ಅನಿ ಬುರ್ಶಿ ಲೊಕಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:39
26 ತಿಳಿವುಗಳ ಹೋಲಿಕೆ  

ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.


ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?


ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.


“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.


ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.


ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.


ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.


ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.


ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಕರ್ತನು ಆಕೆಯನ್ನು ಕಂಡು ಕನಿಕರಿಸಿ, “ಅಳಬೇಡ” ಎಂದು ಆಕೆಗೆ ಹೇಳಿ,


ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ಸವಿಮಾತನಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಹೇಯ ಕೃತ್ಯಗಳು.


ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ.


ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ.


ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.


ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.


ಕೆಟ್ಟ ಹೃದಯದಿಂದ ಪ್ರೀತಿಯನ್ನಾಡುವ ತುಟಿಯು, ಬೆಳ್ಳಿ ಲೇಪನ ಮಾಡಿದ ಮಣ್ಣಿನ ಮಡಿಕೆಯ ಹಾಗೆ.


ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು