Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈ ಉತ್ತರವನ್ನು ಕೇಳಿ ಯೇಸುವಿನ ವಿರೋಧಿಗಳೆಲ್ಲರೂ ನಾಚಿದರು. ಜನರ ಕೂಟವಾದರೋ ಅವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಕಂಡು ಸಂತೋಷಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ನಾಚಿಕೊಂಡರು; ಗುಂಪುಕೂಡಿದ್ದ ಜನರೆಲ್ಲಾ ಆತನಿಂದಾಗುತ್ತಿದ್ದ ಎಲ್ಲಾ ಮಹತ್ವದ ಕಾರ್ಯಗಳಿಗೆ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಮಾತನ್ನು ಕೇಳಿದಾಗ, ಆತನನ್ನು ಟೀಕಿಸುತ್ತಿದ್ದ ಜನರೆಲ್ಲರಿಗೂ ತಮ್ಮ ಬಗ್ಗೆ ನಾಚಿಕೆಯಾಯಿತು. ಯೇಸು ಮಾಡುತ್ತಿದ್ದ ಅದ್ಭುತಕಾರ್ಯಗಳಿಗಾಗಿ ಜನರೆಲ್ಲರೂ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಇದನ್ನು ಹೇಳುತ್ತಿರುವಾಗ, ಅವರ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು, ಆದರೆ ಇತರರು, ಅವರಿಂದ ನಡೆದ ಎಲ್ಲಾ ಮಹಿಮೆಯುಳ್ಳ ಕಾರ್ಯಗಳಿಗಾಗಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹ್ಯಾ ಜೆಜುಚ್ಯಾ ಜಬಾಬಾನ್ ತೆಚ್ಯಾ ದುಸ್ಮಾನಾಕ್ನಿ ಲಜ್ಜಾ ಕರ್‍ಲಿ, ಲೊಕಾ ಜೆಜುನ್ ಕರಲ್ಲಿ ಮೊಟಿ-ಮೊಟಿ ವಿಚತ್ರ್ ಕಾಮಾ ಬಗುನ್ ಕುಶಿ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:17
19 ತಿಳಿವುಗಳ ಹೋಲಿಕೆ  

ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.


ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”


ಆದರೆ ಅವರು ಹೆಚ್ಚು ಮುಂದುವರಿಯಲು ಸಾಧ್ಯವಿಲ್ಲ. ಆ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪ್ರಕಟವಾಗಿ ಬಂದ ಹಾಗೆಯೇ ಇವರದೂ ಪ್ರಕಟವಾಗುವುದು.


ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.


ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.


ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.


ಅವರು ಅದಕ್ಕೆ ಉತ್ತರಕೊಡಲಾರದೆ ಇದ್ದರು.


ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.


ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.


ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು.


ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.


ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.


ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.


ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು