Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ಜೆರುಸಲೇಮೇ, ಜೆರುಸಲೇಮೇ! ನೀನು ಪ್ರವಾದಿಗಳನ್ನು ಕೊಲ್ಲುವವಳು. ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ನೀನು ಕಲ್ಲೆಸೆದು ಕೊಲ್ಲುವೆ. ಕೋಳಿ ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಾನು ನಿನ್ನ ಜನರಿಗೆ ಸಹಾಯ ಮಾಡಲು ಎಷ್ಟೋ ಸಲ ಅಪೇಕ್ಷಿಸಿದೆ. ಆದರೆ ನೀನು ನನಗೆ ಆಸ್ಪದವನ್ನು ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಜೆರುಜಲೆಮಾ, ಜೆರುಜಲೆಮಾ! ತಿಯಾ ಪ್ರವಾದ್ಯಾಕ್ನಿ ಜಿವಾನಿ ಮಾರ್‍ತೆ,ದೆವಾನ್ ಧಾಡಲ್ಲ್ಯಾ, ಬರಿ ಖಬರ್ ಸಾಂಗ್ತಲ್ಯಾಕ್ನಿ, ತಿಯಾ ಗುಂಡ್ಯಾನ್ ಮಾರ್‍ತೆ! ಎಕ್ ಕೊಂಬ್ಡಿನ್ ಅಪ್ನಾಚ್ಯಾ ಪಿಲ್ಲಾಕ್ನಿ ಅಪ್ನಾಚ್ಯಾ ಫಾಕಾಟ್ಯಾತ್ನಿ ನಿಪ್ವುನ್ ಥವ್ನ್ ಘೆಟ್ಲ್ಯಾ ಸರ್ಕೆ,ಅನಿ ಕವ್ಡೆ ಪತರ್ ತುಜ್ಯಾ ಭೊತ್ಯಾನಿ ಮಿಯಾ ಹಾತ್ ಘಾಲುನ್ ಘೆವ್ನ್ ರಾವ್ಚೆ, ತಸೆ ರ್‍ಹಾಲ್ಯಾರ್‍ಬಿ ತಿಯಾ ಮಾಕಾ ಸೊಡಿನೆಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:34
46 ತಿಳಿವುಗಳ ಹೋಲಿಕೆ  

ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.


ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.


ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.


ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.


ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.


ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.


ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”


ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.


ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.


ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.


ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.


ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.


ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು!


ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.


ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.


ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.


ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”


ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.


ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.


ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು, ಅವನು ಕರ್ತನ ಹೆಸರನ್ನು ಹೇಳಿ, “ಕರ್ತನಾದ, ಯೇಸುವೇ, ನನ್ನಾತ್ಮವನ್ನು ಸೇರಿಸಿಕೋ” ಎಂದು ಪ್ರಾರ್ಥಿಸಿ,


ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.


ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.


ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.


ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.


ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು