Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 “ಜೆ ಕೊನ್ ಅಪ್ನಾಕುಚ್ ಖಾಲ್ತಿ ಕರ್‍ತಾ, ತೊ ವರ್‍ತಿ ಹೊತಾ, ಅನಿ ಜೊ ಕೊನ್ ಅಪ್ನಾಕುಚ್ ವರ್‍ತಿ ಕರ್‍ತಾ ತೊ ಖಾಲ್ತಿ ಹೊತಾ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:11
24 ತಿಳಿವುಗಳ ಹೋಲಿಕೆ  

ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.


ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.


ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.


ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.


ಮನುಷ್ಯರ ಗರ್ವವು ಕುಗ್ಗುವುದು. ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ದೀನರನ್ನು ಉದ್ಧರಿಸುವವನೂ, ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?


ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಯೆಹೋವನ ಭಯವೇ ಜ್ಞಾನೋಪದೇಶ, ಗೌರವಕ್ಕೆ ಮೊದಲು ವಿನಯ.


ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ, ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು.


ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸನ್ನಾಗಿ ಮಾಡಿದನು.


ಆತನು ತನ್ನ ಭುಜಪರಾಕ್ರಮದಿಂದ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ದೀನರನ್ನು ಉದ್ಧರಿಸುತ್ತಿ. ಹಮ್ಮಿನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತಿ.


ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಸ್ವಂತಮಾನವನ್ನು ಹೆಚ್ಚಾಗಿ ಯೋಚಿಸುವುದು ಮಾನವಲ್ಲ.


ಪ್ರಭುಗಳನ್ನು ಸಿಂಹಾಸನಗಳಿಂದ ಕೆಳಗೆ ದೊಬ್ಬಿ, ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ.


ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು.


ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ.


ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.


ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಿಲಿನಲ್ಲಿ ಕುಳಿತುಕೊಂಡಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ” ಎಂದು ಅಪ್ಪಣೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು