Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೆ ಆಹ್ವಾನಿತರೆಲ್ಲರೂ ಒಬ್ಬರಾದ ಮೇಲೊಬ್ಬರು ‘ಕ್ಷಮಿಸಬೇಕು,’ ಎಂದು ಹೇಳಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ಅವರೆಲ್ಲರೂ ಕ್ಷವಿುಸಬೇಕೆಂದು ಒಂದೇ ಮನಸ್ಸಿನಿಂದ ಹೇಳುವದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ - ಹೊಲವನ್ನು ಕ್ರಯಕ್ಕೆ ತಕ್ಕೊಂಡಿದ್ದೇನೆ, ಅದನ್ನು ಹೋಗಿ ನೋಡುವದಕ್ಕೆ ನನಗೆ ಅಗತ್ಯವಿದೆ, ನನ್ನನ್ನು ಕ್ಷವಿುಸಬೇಕೆಂದು ಕೇಳಿಕೊಂಡೆನೆಂಬದಾಗಿ ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಎಲ್ಲಾ ಅತಿಥಿಗಳು ತಾವು ಬರಲಾಗುವುದಿಲ್ಲವೆಂದು ಹೇಳಿದರು. ಪ್ರತಿಯೊಬ್ಬನೂ ಒಂದೊಂದು ನೆವ ಹೇಳಿದನು. ಮೊದಲನೆಯವನು, ‘ನಾನು ಇದೀಗ ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ಆದ್ದರಿಂದ ನಾನು ಹೋಗಿ ಅದನ್ನು ನೋಡಬೇಕು. ದಯಮಾಡಿ ಕ್ಷಮಿಸು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಆದರೆ ಅವರೆಲ್ಲರೂ ಒಂದೇ ರೀತಿಯಾಗಿ ನೆಪ ಹೇಳಲಾರಂಭಿಸಿದರು. ಮೊದಲನೆಯವನು, ‘ನಾನು ಒಂದು ಹೊಲ ಕೊಂಡುಕೊಂಡಿದ್ದೇನೆ, ನಾನು ಅದನ್ನು ನೋಡಬೇಕಾಗಿದೆ, ದಯವಿಟ್ಟು ಕ್ಷಮಿಸಬೇಕು,’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಖರೆ, ತೆ, ಸೊಯ್ರೆ, ಎಕ್ಲ್ಯಾಚ್ಯಾ ಫಾಟ್ನಾ ಎಕ್ಲೊ, ಎಕ್ಯೆಕ್ ನೆವಾನ್ ದಿವ್ಕ್‌ ಲಾಗ್ಲೆ, ಪಯ್ಲೆಚ್ಯಾನ್ ತ್ಯಾ ಆಳಾಕ್ “ಮಿಯಾ ಎಕ್ ನ್ಹವೆ ಶೆತ್ ಖರಿದಿ ಕರ್‍ಲಾ, ಮಿಯಾ ಜಾವ್ನ್ ಉಲ್ಲೆ ತೆ ಬಗುಕ್ ಪಾಜೆ ದಯಾ ಕರುನ್ ಮಾಕಾ ಮಾಪ್ ಕರ್”, ಮನುನ್ ಸಾಂಗುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:18
24 ತಿಳಿವುಗಳ ಹೋಲಿಕೆ  

ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ.


ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.


ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ.


ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ.


ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.


ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.


ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.


ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.


ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.


ಮತ್ತೊಬ್ಬನು, ‘ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.


ನಾನಾದರೋ ಶರೀರಸಂಬಂಧವಾದವುಗಳಲ್ಲಿ ಭರವಸವಿಡುವುದಕ್ಕೂ ಆಸ್ಪದವಿದೆ. ಬೇರೆ ಯಾವನಾದರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಡಬಹುದೆಂದು ಯೋಚಿಸುವುದಾದರೆ ನಾನು ಅವನಿಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು