Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸಾಧ್ಯವಿಲ್ಲದಿದ್ದರೆ, ಶತ್ರು ರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಕೇಳಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವನು ಇನ್ನೊಬ್ಬ ಅರಸನನ್ನು ಸೋಲಿಸಲಾಗದಿದ್ದರೆ, ತನ್ನ ರಾಯಭಾರಿಗಳನ್ನು ಕಳುಹಿಸಿ, ಶಾಂತಿಒಪ್ಪಂದಕ್ಕಾಗಿ ಕೇಳಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಸಾಮರ್ಥ್ಯ ಇಲ್ಲದಿದ್ದರೆ, ಇನ್ನೂ ದೂರದಲ್ಲಿರುವಾಗಲೇ ಪ್ರತಿನಿಧಿಗಳನ್ನು ಕಳುಹಿಸಿ ಸಮಾಧಾನವನ್ನು ಕೋರುವನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 “ಅಶೆ ತೆನಿ ಯವ್ಜುನ್ ಅಪ್ನಾಕ್ ತೆಚ್ಯಾ ವಾಂಗ್ಡಾ ಝಗ್ಡುನ್, ಜಿಕುಕ್ ಹೊಯ್ನಾ ಮನುನ್ ಯವ್ಜುನ್, ತೊ ರಾಜಾ ಅಪ್ನಾಚ್ಯಾ ಖಬರ್ ದಿತಲ್ಯಾಕ್, ತೊ ದುಸ್ಮಾನ್ ರಾಜಾ, ಧುರುಚ್ ರಾತಾನಾ ‍ಶಾಂತಿ ಸಮಾದಾನ್ ಕರುನ್ ಘೆವ್ವಾ, ಝಗಡ್ತಲೆ ನಕ್ಕೊ” ಮನುನ್ ಸಾಂಗುನ್ ಧಾಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:32
11 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.


ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು.


“ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.


ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.


ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವುದಿಲ್ಲವೇ?


ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು