Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದರಂತೆ ಒಬ್ಬ ಪಾಪಿಯು ದೇವರ ಕಡೆಗೆ ತಿರುಗಿಕೊಳ್ಳುವ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವದೆಂದು ನಿಮಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅದೇರೀತಿ ಒಬ್ಬ ಪಾಪಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವಾಗ ದೇವದೂತರ ಮುಂದೆ ಸಂತೋಷವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದೇ ಪ್ರಕಾರ, ಪಶ್ಚಾತ್ತಾಪಪಟ್ಟು ದೇವರ ಕಡೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಸೆಚ್, ಮಿಯಾ ತುಮ್ಕಾ ಸಾಂಗ್ತಾ, ಎಕ್ ಪಾಪಿ ಮಾನುಸ್, ಅಪ್ನಾಚೆ ಜಿವನ್ ಬದ್ಲುನ್ ಬರೊ ಹೊಲ್ಲ್ಯಾ ತನ್ನಾ, ದೆವಾಚ್ಯಾ ದುತಾಕ್ನಿ ಲೈ ಕುಶಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:10
23 ತಿಳಿವುಗಳ ಹೋಲಿಕೆ  

ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.


ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.


ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು.


ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.


ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪದಿಂದ ತಿರುಗಿಕೊಂಡು ಜೀವಿಸಿರಿ” ಇದು ಕರ್ತನಾದ ಯೆಹೋವನ ನುಡಿ.


ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.


ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ” ಅಂದನು.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.


ಅವನು ಸ್ವಲ್ಪಕಾಲ ನಿನ್ನಿಂದ ದೂರವಾಗಿಹೋದದ್ದು ಬಹುಶಃ ನೀನು ಅವನನ್ನು ನಿರಂತರವಾಗಿ ಸೇರಿಸಿಕೊಳ್ಳುವುದಕ್ಕಾಗಿಯೇ ಇರಬಹುದು;


ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,


“ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.


“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.


ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು.


ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ.


ಇನ್ನೂ ಆತನು ಹೇಳಿದ್ದೇನಂದರೆ, “ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು