Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗಿರುವಲ್ಲಿ ಸ್ವಲ್ಪ ಕಾಲದ ಮೇಲೆ ಆ ಭಿಕ್ಷಗಾರನು ಸತ್ತನು; ದೇವದೂತರು ಅವನನ್ನು ತೆಗೆದುಕೊಂಡುಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು; ಅವನಿಗೆ ಉತ್ತರಕ್ರಿಯೆಗಳು ಆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಸ್ವಲ್ಪ ಸಮಯದ ನಂತರ ಲಾಜರನು ಸತ್ತನು. ದೇವದೂತರು ಲಾಜರನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಒಂದು ದಿನ ಐಶ್ವರ್ಯವಂತನೂ ಸತ್ತನು. ಅವನಿಗೆ ಸಮಾಧಿ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಒಂದು ದಿನ ಆ ಭಿಕ್ಷುಕನು ಸತ್ತುಹೋದನು. ದೇವದೂತರು ಅವನನ್ನು ಅಬ್ರಹಾಮನ ಬಳಿಗೆ ತೆಗೆದುಕೊಂಡು ಹೋದರು. ಧನವಂತನು ಸಹ ಸತ್ತುಹೋದನು. ಅವನಿಗೆ ಶವಸಂಸ್ಕಾರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೊ ಗರಿಬ್ ಮಾನುಸ್ ಮರ್‍ಲೊ, ಅನಿ ತೆಕಾ ಸರ್‍ಗಾ ವೈಲ್ಯಾ ದುತಾನಿ, ಉಕ್ಲುನ್ ನ್ಹೆವ್ನ್ ಸರ್‍ಗಾ ವೈಲ್ಯಾ ಸನಾಚ್ಯಾ ಜೆವ್ನಾಕ್, ಅಬ್ರಾಹಾಮಾಚ್ಯಾ ಬಾಜುಕುಚ್ ನ್ಹೆವ್ನ್ ಬಸ್ವುಲ್ಯಾನಿ. ತೊ ಸಾವ್ಕಾರ್ ಮಾನುಸ್‍ಬಿ ಮರ್‍ಲೊ, ಅನಿ ತೆಕಾ ಮಾಟಿ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:22
28 ತಿಳಿವುಗಳ ಹೋಲಿಕೆ  

ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.


ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು.


ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?


ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವುದನ್ನು ಕಂಡೆನು. ಅವರು ಸುಖವಾಗಿ ಗತಿಸುವರು. ಧಾರ್ಮಿಕರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದೂ ವ್ಯರ್ಥವೇ.


ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.


ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು, ಸಮಾಧಾನದಿಂದ ಸಮಾಧಿಗೆ ಸೇರುವರು.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,


ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ.


“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.


ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು;


‘ಇಲ್ಲಿ ನಿನಗೇನು ಕೆಲಸ? ಇಲ್ಲಿ ನಿನಗಾಗಿ ಸಮಾಧಿಯನ್ನು ತೋಡಿಸಿಕೊಂಡಿರುವ ನೀನು ಯಾರು? ಉನ್ನತದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ, ಬಂಡೆಯನ್ನು ಕೆತ್ತಿಸಿ, ನಿನಗಾಗಿ ವಿಶ್ರಾಂತಿಯ ಸ್ಥಳವನ್ನು ತೋಡಿಸಿದಿ ಅಲ್ಲವೇ?’”


ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ಅರಸರೂ ತಮ್ಮ ತಮ್ಮ ವೈಭವದೊಡನೆ ಸಮಾಧಿಗಳಲ್ಲಿ ದೀರ್ಘ ನಿದ್ರೆ ಮಾಡುತ್ತಾರೆ.


ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.


ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು