Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಇವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಅವನು ಪಾತಾಳದಲ್ಲಿ ಬಹಳ ಯಾತನೆಪಡುತ್ತಾ ಬಹಳ ದೂರದಲ್ಲಿ ಅಬ್ರಹಾಮನ ಎದೆಗೆ ಒರಗಿಕೊಂಡಿದ್ದ ಲಾಜರನನ್ನು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನು ಪಾತಾಳದಲ್ಲಿ, ಯಾತನೆಪಡುತ್ತಾ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಲ್ಲಿ ಅಬ್ರಹಾಮನನ್ನೂ, ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ನರ್‍ಕಾತ್ ಮೊಟ್ಯಾ ವಳ್ವಳ್ಯಾಚ್ಯಾ ಜಾಗ್ಯಾತ್, ತೊ ಹೊತ್ತೊ. ಥೈತ್ನಾ ತೆನಿ ವೈರ್ ಬಗಟಲ್ಲ್ಯಾ ತನ್ನಾ, ತೆಕಾ ಅಬ್ರಾಮ್ ದಿಸ್ಲೊ ಥೈತ್ನಾ ತೊ ಧುರ್ ಹೊತ್ತೊ, ಅನಿ ಲಾಜರಸ್ ಅಬ್ರಾಹಾಮಾಚ್ಯಾ ಬಾಜುಕುಚ್ ಬಸಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:23
26 ತಿಳಿವುಗಳ ಹೋಲಿಕೆ  

ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.


ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ’ ಅಂದನು.


ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?


ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.


ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.


ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.


ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.


ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.


ಬರುತ್ತಿರುವ ನಿನ್ನನ್ನು ಎದುರುಗೊಳ್ಳುವುದಕ್ಕೆ ಪಾತಾಳವು ತಳಮಳಪಡುತ್ತದೆ. ನಿನಗೋಸ್ಕರ ಸತ್ತವರನ್ನು, ಅಂದರೆ ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರನ್ನು ಎಚ್ಚರಗೊಳಿಸಿ, ಜನಾಂಗಗಳ ಸಕಲ ಅರಸರನ್ನು ಅವರವರ ಆಸನಗಳಿಂದ ಎಬ್ಬಿಸುತ್ತದೆ.


“ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?”


ಎಲೈ ಕಪೆರ್ನೌಮೇ ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.


ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.


ಜೀವದ ಮಾರ್ಗವು ವಿವೇಕಿಯನ್ನು ಮೇಲಕ್ಕೆತ್ತುವುದು; ಅದು ಅವನನ್ನು ಪಾತಾಳದಿಂದ ತಪ್ಪಿಸುವುದು.


ಆ ಮನೆಯು ಪ್ರೇತ ನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು.


ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದುಹೋಗುತ್ತದೆ.


ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು, ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು.


ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.


ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. ಸೆಲಾ


ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.


‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು