Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲಾಗಿ ಆ ಪಾರುಪಾತ್ಯಗಾರನು, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಪಾರುಪಾತ್ಯೆಯ ಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಆ ಮೇಸ್ತ್ರಿ, ‘ಈಗ ಏನುಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗಿರಲಾಗಿ ಆ ಮನೆವಾರ್ತೆಯವನು - ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಮನೆವಾರ್ತೆಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ; ಭಿಕ್ಷಾ ಬೇಡುವದಕ್ಕೆ ನನಗೆ ನಾಚಿಕೆಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಆಗ, ಆ ಮೇಲ್ವಿಚಾರಕನು ತನ್ನೊಳಗೆ, ‘ಈಗ ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಈ ಕೆಲಸದಿಂದ ತೆಗೆದುಬಿಡುತ್ತಾನೆ! ಗುಂಡಿಗಳನ್ನು ಅಗಿಯುವುದಕ್ಕೂ ನನಗೆ ಬಲವಿಲ್ಲ. ಭಿಕ್ಷೆ ಬೇಡುವುದಕ್ಕೂ ನನಗೆ ನಾಚಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಆಗ ಆ ನಿರ್ವಾಹಕನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ. ಅಗೆಯಲು ನನಗೆ ಶಕ್ತಿಯಿಲ್ಲ, ಭಿಕ್ಷೆ ಬೇಡಲು ನನಗೆ ನಾಚಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ತ್ಯಾ ಕಾರ್‍ಬಾರ್‍ಯಾನ್ ಅಪ್ನಾಚ್ಯಾ ಮನಾತುಚ್ “ಅತ್ತಾ ಜಾಲ್ಯಾರ್, ಮಾಜೊ ಧನಿ ಮಾಕಾ ಮಾಜ್ಯಾ ಕಾಮಾ ವೈನಾ ಕಾಡ್ನಾರ್ ಹಾಯ್,ಮಿಯಾ ಅತ್ತಾ ಕಾಯ್ ಕರು? ಖಂಡುಕ್ ಮಾಕಾ ಬಳ್ ನಾ, ಅನಿ ಭಿಕ್ ಮಾಗುಕ್ ಮಾಕಾ ಲಜ್ಜಾ ಕರ್‍ತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:3
26 ತಿಳಿವುಗಳ ಹೋಲಿಕೆ  

ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ.


ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು.


ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?” ಎಂದು ವಿಚಾರಿಸಿದರು.


ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,


ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.


ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು.


ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ,


ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.


ನೀವು ಹಬ್ಬದ ದಿನದಲ್ಲಿ, ಯೆಹೋವನ ಮಹೋತ್ಸವ ದಿನದಲ್ಲಿ ಏನು ಮಾಡುವಿರಿ?


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ದಂಡನೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ಆಳನ್ನು ಬಾಲ್ಯದಿಂದ ಕೋಮಲವಾಗಿ ಸಾಕಿದರೆ, ತರುವಾಯ ಅವನು ಎದುರುಬೀಳುವನು.


ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?


ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.


ಕೆಲಸಗಳ್ಳನು ಕೆಡುಕನಿಗೆ ತಮ್ಮ.


ಸೋಮಾರಿಯ ಮಾರ್ಗ ಮುಳ್ಳುಬೇಲಿ, ಯಥಾರ್ಥವಂತನ ಮಾರ್ಗ ರಾಜಮಾರ್ಗ.


ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.


ಹಾಮಾನನು ಬಂದಾಗ, “ಅರಸನು ಯಾರನ್ನಾದರು ಸನ್ಮಾನಿಸಬೇಕೆಂದು ಇಷ್ಟವುಳ್ಳವನಾಗಿದ್ದರೆ ಅಂಥವನಿಗೆ ಮಾಡಬೇಕಾದದ್ದೇನು?” ಎಂದು ಅವನನ್ನು ಕೇಳಿದನು.


ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು” ಎಂದು ಹೇಳಿದನು.


ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು.


ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.


ಈ ಪಾರುಪಾತ್ಯೆಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ’ ಎಂದು ತನ್ನೊಳಗೆ ಅಂದುಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು