Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕಂದರೆ ಲೌಕಿಕರು ತಮ್ಮಂಥವರ ವಿಷಯದಲ್ಲಿ ಬೆಳಕಿನ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಬಳಿಕ ಯಜಮಾನನು ಮೋಸಗಾರನಾದ ಮೇಲ್ವಿಚಾರಕನಿಗೆ, ‘ನೀನು ಜಾಣತನ ಮಾಡಿದೆ’ ಎಂದು ಹೇಳಿದನು. ಹೌದು, ಲೌಕಿಕ ಜನರು ತಮ್ಮ ಜನರೊಡನೆ ವ್ಯಾಪಾರದಲ್ಲಿ ದೈವಿಕ ಜನರಿಗಿಂತಲೂ ಜಾಣರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆಗ ಯಜಮಾನನು ಆ ಅಪನಂಬಿಗಸ್ತ ನಿರ್ವಾಹಕನು ಕುಯುಕ್ತಿಯಿಂದ ಮಾಡಿದ್ದನ್ನು ಹೊಗಳಿದನು. ಯೇಸು ಮುಂದುವರಿಸಿ ಹೇಳಿದ್ದು: ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಯುಕ್ತಿಯುಳ್ಳವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 “ಅಶೆ ಹ್ಯಾ ಕಾರ್‍ಬಾರ್‍ಯಾನ್ ಎವ್ಡೆ ಶಾನೆಪಾನ್ ವಾಪರಲ್ಲೆ ಬಗುನ್, ಸಾವ್ಕಾರಾನ್ ತೆಕಾ ಶಬಾಸ್ಕಿ ದಿಲ್ಯಾನ್. ಕಶ್ಯಾಕ್ ಮಟ್ಲ್ಯಾರ್, ಹ್ಯಾ ಜಗಾತ್ಲ್ಯಾ ಲೊಕಾಕ್ನಿ, ತೆಂಚಿ ವಿಶಯಾ ಕಶಿ ಕರುನ್ ಸಂಬಾಳ್ತಲಿ ಮನುನ್, ದೆವಾಚ್ಯಾ ವಾಟೆನ್ ಚಲ್ತಲ್ಯಾ ಲೊಕಾಂಚ್ಯಾನ್ಕಿ, ಬರೆ ಗೊತ್ತ್ ಹಾಯ್”,ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:8
23 ತಿಳಿವುಗಳ ಹೋಲಿಕೆ  

ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.


ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.


ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು.


ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.


ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.


ಈ ಪಾರುಪಾತ್ಯೆಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ’ ಎಂದು ತನ್ನೊಳಗೆ ಅಂದುಕೊಂಡು,


ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ” ಎಂದು ಹೇಳಿ


ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.


ಯೇಸು ಅವರಿಗೆ, “ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ.


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.


ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”


ಕರ್ತನು ಈ ಸಾಮ್ಯವನ್ನು ಹೇಳಿದ ಮೇಲೆ, “ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ.


ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ.


ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು” ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.


ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ.


ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು.


ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ.


ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು