Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದನ್ನು ಕೇಳಿದ ಯೇಸು, “ನೀನು ಮಾಡಬೇಕಾದ ಕಾರ್ಯ ಇನ್ನೂ ಒಂದು ಉಳಿದಿದೆ; ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೇಸು ಅದನ್ನು ಕೇಳಿ ಅವನಿಗೆ - ಇನ್ನೂ ನಿನಗೆ ಒಂದು ಕಡಿಮೆಯಾಗಿದೆ; ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಯೇಸು ಅವನಿಗೆ, “ನೀನು ಮಾಡಬೇಕಾದ ಇನ್ನೊಂದು ಕಾರ್ಯವಿದೆ. ನಿನ್ನ ಆಸ್ತಿಯನ್ನೆಲ್ಲಾ ಮಾರಿ ಅದರಿಂದ ಬಂದ ಹಣವನ್ನು ಬಡ ಜನರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ದೊರೆಯುವುದು. ನೀನಾದರೋ ಬಂದು ನನ್ನನ್ನು ಹಿಂಬಾಲಿಸು!” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹೆ ಆಯ್ಕಲ್ಲ್ಯಾ ತನ್ನಾ, ಜೆಜುನ್ ತೆಕಾ “ಖಾಲಿ ಎಕ್ ಕಾಮ್ ತಿಯಾ ಕರ್‍ತಲೆ ಹುರ್‍ಲಾ; ತುಜೆ ಮನುನ್ ಹೊತ್ತೆ ಸಗ್ಳೆ ಇಕ್, ಅನಿ ಯೆಲ್ಲೆ ಪಯ್ಸೆ ಗರಿಬಾಕ್ನಿ ದಿ, ಅನಿ ಸರ್‍ಗಾರ್ ತುಕಾ ಸಾವ್ಕಾರ್ಕಿ ತಯಾರ್ ಕರುನ್ ಥವಲ್ಲಿ ರ್‍ಹಾತಾ, ಮಾನಾ ಯೆವ್ನ್ ಮಾಜ್ಯಾ ಫಾಟ್ನಾ ಯೆ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:22
16 ತಿಳಿವುಗಳ ಹೋಲಿಕೆ  

ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.


ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.


ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.


ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.


ಸಹೋದರರೇ, ನಾನಂತೂ ಪಡೆದುಕೊಂಡವನೆಂದು ನನ್ನನ್ನು ಈ ವರೆಗೂ ಎಣಿಸಿಕೊಳ್ಳುವುದಿಲ್ಲ. ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವುದಕ್ಕಾಗಿ ಎದೆಬೊಗ್ಗಿದವನಾಗಿ,


ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.


ಅದಕ್ಕವನು, “ನಾನು ಬಾಲ್ಯದಿಂದಲೂ ಇವೆಲ್ಲನ್ನು ಸರಿಯಾಗಿ ಪಾಲಿಸುತ್ತಾ ಬಂದಿದ್ದೇನೆ” ಎಂದು ಹೇಳಿದನು.


ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು