Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವನು ಈ ಕಾಲದಲ್ಲಿ ಅದಕ್ಕಿಂತಲೂ ಮಿಗಿಲಾದುದನ್ನೂ ಮುಂದಿನ ಲೋಕದಲ್ಲಿ ಅಮರಜೀವವನ್ನೂ ಪಡೆಯುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವನಿಗೆ ಈಗಿನ ಕಾಲದಲ್ಲಿ ಅನೇಕ ಪಾಲು ಹೆಚ್ಚಾದವುಗಳು ಸಿಕ್ಕೇ ಸಿಕ್ಕುತ್ತವೆ; ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅವನು ಈ ಜೀವನದಲ್ಲಿಯೇ ಅವುಗಳಿಗಿಂತ ಅನೇಕ ಪಾಲು ಹೆಚ್ಚಾದವುಗಳನ್ನು ಪಡೆಯುವನು ಮತ್ತು ತನ್ನ ಮುಂದಿನ ಲೋಕದಲ್ಲಿ ದೇವರೊಂದಿಗೆ ಸದಾಕಾಲ ಜೀವಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಕಾಲದಲ್ಲಿ ನಿತ್ಯಜೀವವನ್ನೂ ಹೊಂದುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತೊ ತೆಚ್ಯಾ ಜಿವನಾತ್, ತೆಚೆನ್ಕಿ ಜಾಸ್ತಿಚೆ ಘೆತಾ. ಅನಿ ಆಕ್ರಿಚ್ಯಾ ಕಾಲಾತ್ ಕನ್ನಾಚ್ ಮರಾನ್ ನಸ್ತಾನಾ ಝಿತ್ತೊ ರ್‍ಹಾತಲೆ ಭಾಗ್‍ಬಿ ತೆಕಾ ಗಾವ್ತಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:30
19 ತಿಳಿವುಗಳ ಹೋಲಿಕೆ  

ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ, ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.


ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ.


ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.


ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ, ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.


ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.


ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.


ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.


ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಯೋದ್.


ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು