Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಪ್ರತಿನಿತ್ಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದರು. ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಜಾಪ್ರಮುಖರೂ ಅವರನ್ನು ಕೊಲೆಮಾಡಲು ಹವಣಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಮತ್ತು ಆತನು ದಿನಾಲು ದೇವಾಲಯದಲ್ಲಿ ಉಪದೇಶಮಾಡುತ್ತಿದ್ದನು. ಅಷ್ಟರಲ್ಲಿ ಮಹಾಯಾಜಕರೂ ಶಾಸ್ತ್ರಿಗಳೂ ಪ್ರಜೆಗಳಲ್ಲಿ ಮುಖ್ಯಸ್ಥರೂ ಆತನನ್ನು ಕೊಲ್ಲುವದಕ್ಕೆ ಸಂದರ್ಭನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಯೇಸು ದೇವಾಲಯದಲ್ಲಿ ಪ್ರತಿದಿನ ಜನರಿಗೆ ಉಪದೇಶಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಜನರ ನಾಯಕರಲ್ಲಿ ಕೆಲವರು ಯೇಸುವನ್ನು ಕೊಲ್ಲಲು ಬಯಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಯೇಸು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಿದ್ದರು. ಆದರೆ ಮುಖ್ಯಯಾಜಕರೂ ನಿಯಮ ಬೋಧಕರೂ ಜನರ ಪ್ರಮುಖರೂ ಯೇಸುವನ್ನು ಕೊಲ್ಲುವುದಕ್ಕೆ ಹವಣಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಸದ್ದಿಚ್ ಜೆಜು ದೆವಾಚ್ಯಾ ಗುಡಿತ್ ಲೊಕಾಕ್ನಿ ಶಿಕ್ವುಲಾಗಲ್ಲೊ, ಮುಖ್ಯ ಯಾಜಕಾ, ಖಾಯ್ದೆ ಶಿಕ್ವುತಲಿ ಲೊಕಾ , ಅನಿ ಲೊಕಾಂಚಿ ವ್ಹಡಿಲಾ ಜೆಜುಕ್ ಜಿವಾನಿ ಮಾರ್‍ತಲಿ ಯವ್ಜನ್ ಕರುಕ್ ಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:47
17 ತಿಳಿವುಗಳ ಹೋಲಿಕೆ  

ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.


ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, “ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;


ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.


ಅವರು ಪುನಃ ಆತನನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು, ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಹೋದನು.


ಅವರಲ್ಲಿ ಕೆಲವರು ಆತನನ್ನು ಬಂಧಿಸಬೇಕೆಂದಿದ್ದರೂ ಆದರೆ ಯಾರು ಆತನ ಮೇಲೆ ಕೈ ಹಾಕಲಿಲ್ಲ.


ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?” ಎಂದು ಕೇಳಿದನು.


ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.


ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.


ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.


ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು” ಎಂದು ಉತ್ತರ ಕೊಟ್ಟನು.


ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.


ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು