Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ, “ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು” ಎಂದು ಅವನಿಗೆ ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೇಸು ಆ ಸ್ಥಳಕ್ಕೆ ಬಂದು, ತಲೆಯೆತ್ತಿ ನೋಡಿ, “ಜಕ್ಕಾಯಾ, ಒಡನೆ ಇಳಿದು ಬಾ; ಈ ದಿನ ನಿನ್ನ ಮನೆಯಲ್ಲಿ ನಾನು ತಂಗಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ - ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಇಳುಕೊಳ್ಳಬೇಕು ಎಂದು ಅವನಿಗೆ ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೇಸು ಆ ಸ್ಥಳಕ್ಕೆ ಬಂದಾಗ, ಮರದ ಮೇಲೆ ಕುಳಿತಿದ್ದ ಜಕ್ಕಾಯನನ್ನು ಕಣ್ಣೆತ್ತಿ ನೋಡಿ ಅವನಿಗೆ, “ಜಕ್ಕಾಯನೇ ಬೇಗನೆ ಕೆಳಗಿಳಿದು ಬಾ! ಈ ದಿನ ನಾನು ನಿನ್ನ ಮನೆಯಲ್ಲಿ ಇಳಿದುಕೊಳ್ಳಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೇಸು ಆ ಸ್ಥಳಕ್ಕೆ ಬಂದು, ಮೇಲಕ್ಕೆ ನೋಡಿ ಅವನಿಗೆ, “ಜಕ್ಕಾಯನೇ, ತಕ್ಷಣವೇ ಇಳಿದು ಬಾ. ನಾನು ಇಂದು ನಿನ್ನ ಮನೆಯಲ್ಲಿ ತಂಗಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜೆಜುನ್ ತ್ಯಾ ಜಾಗ್ಯಾರ್ ಯೆವ್ನ್ ಪಾವಲ್ಲ್ಯಾ, ತನ್ನಾ ವೈರ್ ಬಗಟ್ಲ್ಯಾನ್ ಅನಿ ಜಾಕ್ಕೆವ್ಸಾಕ್, ಜಾಕ್ಕೆವ್ಸ್, ಲಗ್ಗುನಾ ಖಾಲ್ತಿ ಉತ್ರುನ್ ‍ಯೆ, ಕಶ್ಯಾಕ್ ಮಟ್ಲ್ಯಾರ್, ಆಜ್ ತುಜ್ಯಾ ಘರಾತ್ ಮಾಕಾ ವಸ್ತಿ ರ್‍ಹಾವ್ಕ್ ಪಾಜೆ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:5
17 ತಿಳಿವುಗಳ ಹೋಲಿಕೆ  

ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.


ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.


ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.


“‘ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿದೆನು. ಹೌದು, ‘ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆನು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.


ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಸುಂಕವಸೂಲಿಯ ಮುಖ್ಯಸ್ಥನು ಮತ್ತು ಐಶ್ವರ್ಯವಂತನಾಗಿದ್ದನು.


ಆದಕಾರಣ ಆತನನ್ನು ನೋಡುವುದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು.


ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು