Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅದು ಯೆಹೂದ್ಯರಲ್ಲದವರಿಗೆ ಪ್ರಕಟಣೆಯ ಬೆಳಕೂ, ನಿಮ್ಮ ಪ್ರಜೆಯಾದ ಇಸ್ರಾಯೇಲರ ಮಹಿಮೆಯೂ ಆಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೊ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ತುಜಿ ಕುಶಿ ಕಾಯ್ ಮನುನ್ ದಾಕ್ವುತಲೊ ಉಜ್ವೊಡ್ ಅನಿ ತುಜ್ಯಾ ಇಸ್ರಾಯೆಲಾಚ್ಯಾ ಲೊಕಾಕ್ನಿ ತೊ ಮಹಿಮಾ ಹಾನ್ತಾ”. ತೆಚ್ಯಾ ಸಾಟ್ನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:32
22 ತಿಳಿವುಗಳ ಹೋಲಿಕೆ  

ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”


ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ.


ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.


ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.


“ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.


ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.


ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.


ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.


ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.


“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ” ಎಂಬ ವೇದೋಕ್ತಿ ನೆರವೇರುವುದಕ್ಕಾಗಿಯೇ ಹೀಗಾಯಿತು.


ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.


ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು.


“ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು