Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಆತನು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದವನು ಎಂದು ನಿಮಗೆ ತಿಳಿಯಲಿಲ್ಲವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಅದಕ್ಕೆ ಉತ್ತರವಾಗಿ ಯೇಸು, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆಹೋಯಿತೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಆತನು ಅವರಿಗೆ - ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದದ್ದು ನಿಮಗೆ ತಿಳಿಯಲಿಲ್ಲವೇ? ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಯೇಸು ಅವರಿಗೆ, “ನೀವು ನನಗೋಸ್ಕರ ಏಕೆ ಹುಡುಕಬೇಕಿತ್ತು? ನನ್ನ ತಂದೆಯ (ದೇವರ) ಕೆಲಸ ಎಲ್ಲಿರುತ್ತದೋ ಅಲ್ಲಿ ನಾನು ಇರಬೇಕು ಎಂಬುದನ್ನು ನೀವು ತಿಳಿದಿರಬೇಕಾಗಿತ್ತು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಯೇಸು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕೆಂಬುದು ನಿಮಗೆ ತಿಳಿಯಲಿಲ್ಲವೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ತನ್ನಾ ತೆನಿ “ತುಮಿ ಮಾಕಾ ಕಶ್ಯಾಕ್ ಹುಡ್ಕುಕ್ ಲಾಗಲ್ಲ್ಯಾಶಿ? ಮಿಯಾ ಮಾಜ್ಯಾ ಬಾಬಾಚ್ಯಾ ಘರಾತ್ ರಾವ್ಕ್ ಪಾಜೆ ಮನುನ್ ತುಮ್ಕಾ ಗೊತ್ತ್ ನಾ ಕಾಯ್?” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:49
11 ತಿಳಿವುಗಳ ಹೋಲಿಕೆ  

ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.


ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.


ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು, “ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ” ಎಂದು ಹೇಳಲು,


ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.


ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.


ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.


ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು