Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಒಂದು ನಾಣ್ಯವನ್ನು ತೋರಿಸಿರಿ. ಇದರಲ್ಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಕೇಳಿದರು. ಅದಕ್ಕೆ ಅವರು, “ರೋಮ್‍ ಚಕ್ರವರ್ತಿಯವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರಿಗೆ - ನನಗೆ ಒಂದು ಹಣವನ್ನು ತೋರಿಸಿರಿ. ಇದರಲ್ಲಿ ಯಾರ ತಲೆಯೂ ಮುದ್ರೆಯೂ ಅದೆ ಎಂದು ಕೇಳಿದ್ದಕ್ಕೆ ಅವರು - ಕೈಸರನದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದ್ದರಿಂದ ಯೇಸು ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಆ ನಾಣ್ಯದ ಮೇಲೆ ಯಾರ ಹೆಸರಿದೆ? ಅದರ ಮೇಲೆ ಯಾರ ಮುಖಚಿತ್ರವಿದೆ?” ಎಂದು ಕೇಳಿದನು. ಅವರು, “ಸೀಸರನದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಒಂದು ಬೆಳ್ಳಿ ನಾಣ್ಯವನ್ನು ತೋರಿಸಿರಿ. ಇದರಲ್ಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಅವರನ್ನು ಕೇಳಲು ಅವರು, “ಕೈಸರನದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 “ಮಾಕಾ ಎಕ್ ಚಾಂದಿಚೊ ಪೈಸೊ ದಾಕ್ವಾ ಹೆಚ್ಯಾ ವರ್‍ತಿ ಹೊತ್ತೆ ಚಿತ್ತರ್, ಅನಿ ನಾವ್ ಕೊನಾಚೆ?” ಮನುನ್ ಇಚಾರ್‍ಲ್ಯಾನ್. ತೆನಿ ಚಕ್ರವರ್ತಿಚೆ ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:24
14 ತಿಳಿವುಗಳ ಹೋಲಿಕೆ  

ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.


ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.


ಅಗ್ರಿಪ್ಪನು ಫೆಸ್ತನಿಗೆ; “ಈ ಮನುಷ್ಯನು ಕೈಸರನಿಗೆ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡುಗಡೆ ಮಾಡಬಹುದಿತ್ತು” ಎಂದು ಹೇಳಿದನು.


ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.


“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.


ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು.


ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ


ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.


ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.


ಆತನು, “ಈ ಸ್ವರೂಪವು ಈ ಮುದ್ರೆಯೂ ಯಾರದು?” ಎಂದು ಕೇಳಿದ್ದಕ್ಕೆ


ಯೇಸು ಅವರ ಕುಯುಕ್ತಿಯನ್ನು ಅರಿತುಕೊಂಡು,


ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.


ಆಗ ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು