Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೇಸು ಜನರ ಮುಂದೆ ಹೇಳಿದ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ, ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೇಸು ಕೊಟ್ಟ ಈ ಉತ್ತರಕ್ಕೆ ಬೆರಗಾಗಿ ಆ ಗೂಢಚಾರರು ಬಾಯಿ ಮುಚ್ಚಿಕೊಂಡರು. ಜನರ ಮುಂದೆ, ಯೇಸುವಿನ ಮಾತುಗಳಲ್ಲಿ ತಪ್ಪು ಕಂಡುಹಿಡಿಯಲು ಅವರಿಂದ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆತನ ಮಾತಿನಲ್ಲಿ ಅವರು ಜನರ ಮುಂದೆ ಏನೂ ಹಿಡಿಯಲಾರದೆ ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಜನರು ಆತನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿ ಆಶ್ಚರ್ಯಪಟ್ಟು ಮರುಪ್ರಶ್ನೆ ಕೇಳದಂತಾದರು. ಜನರ ಮುಂದೆ ಯೇಸುವನ್ನು ಮಾತಿನಲ್ಲಿ ಸಿಕ್ಕಿಸಲು ಅವರಿಂದಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೇಸು ಜನರ ಮುಂದೆ ಬಹಿರಂಗವಾಗಿ ಹೇಳಿದ ಮಾತಿನಲ್ಲಿ ಅವರು ತಪ್ಪು ಕಂಡುಹಿಡಿಯಲಾರದೆ ಹೋದರು. ಯೇಸುವಿನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಥೈ ಲೊಕಾಂಚ್ಯಾ ಇದ್ರಾಕ್ ತೆನಿ ತೆಕಾ ಕಸ್ಲ್ಯಾಬಿ ಚುಕಿತ್ ಸಿರ್‍ಕುಕ್ ಹೊವ್ಕ್ ನಾ, ತಸೆ ಮನುನ್ ಥಂಡ್ ಪಡ್ಲ್ಯಾನಿ. ಅನಿ ಜೆಜುನ್ ಸಾಂಗಲ್ಲೊ ಜಬಾಬ್ ಆಯ್ಕುನ್ ಅಜಾಪ್ ಹೊಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:26
14 ತಿಳಿವುಗಳ ಹೋಲಿಕೆ  

ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.


ಅನೇಕರು, ಪ್ರಮುಖವಾಗಿ ಸುನ್ನತಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.


ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.


ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.


ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು.


ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.


ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.


ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು