Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ಇವೆಲ್ಲಾ ನಡೆಯುವದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಗಳ ಅಧಿಕಾರಸ್ಥರ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿವಿುತ್ತವಾಗಿ ಅರಸುಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ತೆಗೆದುಕೊಂಡುಹೋಗಿ ಹಿಂಸೆಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು, ಹಿಂಸಿಸಿ ಸಭಾಮಂದಿರಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ, ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆ ಸಗ್ಳೆ ಘಡುಚ್ಯಾ ಅದ್ದಿ ತುಮ್ಕಾ ಧರುನ್ ಘೆವ್ನ್ ಜಾವ್ನ್ ಹೊತಾ, ಅನಿ ತರಾಸ್ ದಿವ್ನ್ ಹೊತಾ; ತುಮ್ಕಾ ಸಿನಾಗೊಗಾತ್ನಿ ನ್ಹೆವ್ನ್ ತುಮ್ಚಿ ಪರಿಕ್ಷಾ ಕರುನ್ ಹೊತಾ, ಅನಿ ತುಮ್ಕಾ ಬಂದಿಖಾನ್ಯಾತ್ ಘಾಲುನ್ ಹೊತಾ: ಮಾಜೆಸಾಟಿ ತುಮ್ಕಾ ರಾಜಾಂಚ್ಯಾ, ಅನಿ ಅದಿಕಾರ್‍ಯಾಂಚ್ಯಾ ಇದ್ರಾಕ್ ವೊಡುನ್ ಹಾನುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:12
31 ತಿಳಿವುಗಳ ಹೋಲಿಕೆ  

ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ


ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.


ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು.


ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.


ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.


ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.


ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಇವೆಲ್ಲಾ (ನೂತನ ಕಾಲವು ಹುಟ್ಟುವ) ಪ್ರಸವವೇದನೆಯ ಪ್ರಾರಂಭ.


ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.


ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು