Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಯೇಸುಸ್ವಾಮಿ ಹಗಲೆಲ್ಲಾ ಮಹಾದೇವಾಲಯದಲ್ಲಿ ಬೋಧಿಸುತ್ತಿದ್ದರು. ರಾತ್ರಿಯಲ್ಲಿ ಪಟ್ಟಣದಿಂದ ಹೊರಟು, ಓಲಿವ್ ತೋಪಿನ ಗುಡ್ಡದಲ್ಲಿ ತಂಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆತನು ಹಗಲು ದೇವಾಲಯದಲ್ಲಿ ಉಪದೇಶಮಾಡುತ್ತಾ ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೇಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ಇಳುಕೊಳ್ಳುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೇಸು ಹಗಲೆಲ್ಲಾ ದೇವಾಲಯದಲ್ಲಿ ಜನರಿಗೆ ಉಪದೇಶಿಸುತ್ತಿದ್ದನು. ರಾತ್ರಿಯಲ್ಲಾದರೋ ಪಟ್ಟಣದ ಹೊರಗಿದ್ದ ಆಲಿವ್ ಮರಗಳ ಗುಡ್ಡದ ಮೇಲೆ ಇರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಯೇಸು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು, ರಾತ್ರಿಯಲ್ಲಿ ಹೊರಟುಹೋಗಿ ಓಲಿವ್ ಗುಡ್ಡದಲ್ಲಿ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತ್ಯಾ ದಿಸಾತ್ನಿ ಜೆಜು ದಿಸ್‍ಬರ್ ದೆವಾಚ್ಯಾ ಗುಡಿತ್ ಲೊಕಾಕ್ನಿ ಶಿಕ್ವುನ್ಗೆತುಚ್ ರ್‍ಹಾಲೊ, ಅನಿ ಸಾಂಜ್ ಹೊಲ್ಲ್ಯಾ ತನ್ನಾ, ತೊ ಭಾಯ್ರ್ ಒಲಿವ್ ಮಡ್ಡಿ ವರ್‍ತಿ ಗೆಲೊ, ಅನಿ ಪುರಾ ರಾತ್ ತೊ ಥೈಚ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:37
15 ತಿಳಿವುಗಳ ಹೋಲಿಕೆ  

ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು.


ಸಂಜೆಯಾದಾಗ ಯೇಸುವೂ, ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು.


ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, “ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;


ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು.


ಯೇಸು ಮತ್ತು ಆತನ ಶಿಷ್ಯರು ಯೆರೂಸಲೇಮಿಗೆ ಸಮೀಪಿಸಿ ಆಲಿವ್ ಎಣ್ಣೆಯ ಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೆ ಬಂದಾಗ


ಆಗ ಅವರು ಆಲೀವ್ ಮರಗಳ ಗುಡ್ಡದಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದರು. ಆ ಗುಡ್ಡಕ್ಕೂ ಯೆರೂಸಲೇಮಿಗೂ ಸಬ್ಬತ್ ದಿನದಲ್ಲಿ ಪ್ರಯಾಣಮಾಡುವಷ್ಟು ದೂರವಿತ್ತು.


ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.


ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ,


ಮರುದಿನ ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನಿಗೆ ಹಸಿವಾಯಿತು.


ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.


ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.


ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು” ಎಂದು ಉತ್ತರ ಕೊಟ್ಟನು.


ಅನಂತರ ಆತನು ಎಣ್ಣೆಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು,


ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು.


ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು