Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಷ್ಟರಲ್ಲಿ ಯೇಸುವಿನ ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತಿನ ಯೂದನು ಸೈತಾನನಿಗೆ ವಶನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರ ಲೆಕ್ಕದಲ್ಲಿ ಸೇರಿದವನಾದ ಇಸ್ಕರಿಯೋತೆಂಬ ಯೂದನಲ್ಲಿ ಪ್ರವೇಶಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸುವಿನ ಹನ್ನೆರಡು ಅಪೊಸ್ತಲರಲ್ಲಿ ಇಸ್ಕರಿಯೋತ ಯೂದನು ಒಬ್ಬನಾಗಿದ್ದನು. ಸೈತಾನನು ಇವನೊಳಗೆ ಪ್ರವೇಶಿಸಿ ಕೆಟ್ಟಕಾರ್ಯವೊಂದನ್ನು ಮಾಡುವಂತೆ ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಎಂದು ಕರೆಯಲಾಗುವ ಯೂದನಲ್ಲಿ, ಸೈತಾನನು ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಸೈತಾನ್ ಜೆಜುಚ್ಯಾ ಬಾರಾ ಜಾನಾ ಶಿಸಾನಿತ್ಲ್ಯಾ ಜುದಾಸ್ ಇಸ್ಕರಿಯೊತಾಚ್ಯಾ ಭುತ್ತುರ್ ಗುಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:3
16 ತಿಳಿವುಗಳ ಹೋಲಿಕೆ  

ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?


“ಆದರೂ ನೋಡಿರಿ, ನನ್ನನ್ನು ಹಿಡಿದುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ.


ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.


ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.


ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡಿದುಕೊಡುವವನು.


ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.


ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಎಂಬಿವರುಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು