Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:70 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

70 ಆಗ ಎಲ್ಲರು, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಲು ಆತನು ಅವರಿಗೆ, “ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

70 ಅದಕ್ಕೆ ಅವರೆಲ್ಲರೂ, “ಹಾಗಾದರೆ, ನೀನು ದೇವರ ಪುತ್ರನೋ?’ ಎಂದು ಕೇಳಿದರು. “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ,” ಎಂದು ಯೇಸು ಉತ್ತರಕೊಡಲು ಅವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

70 ಆಗ ಎಲ್ಲರು - ಹಾಗಾದರೆ ನೀನು ದೇವರ ಕುಮಾರನೋ ಎಂದು ಕೇಳಲು ಆತನು ಅವರಿಗೆ - ನನ್ನನ್ನು ಅವನೇ ಎಂದು ನೀವೇ ಹೇಳುತ್ತೀರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

70 ಅವರೆಲ್ಲರೂ, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಿದರು. ಯೇಸು ಅವರಿಗೆ, “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

70 ಆಗ ಅವರೆಲ್ಲರೂ, “ಹಾಗಾದರೆ ನೀನು ದೇವರ ಪುತ್ರನೋ?” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ, “ನಾನೇ ಆತನು ಎಂದು ನೀವೇ ಹೇಳುತ್ತಿದ್ದೀರಿ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

70 ತೆನಿ ಸಗ್ಳ್ಯಾನಿ“ತಸೆ ಜಾಲ್ಯಾರ್,ತಿಯಾ ದೆವಾಚೊ ಲೆಕ್ ಕಾಯ್?” ಮನುನ್ ಇಚಾರ್‍ಲ್ಯಾನಿ. ತೆನಿ ತೆಂಕಾ “ತುಮಿ ಸಾಂಗಲ್ಲೊಚ್ ಮಿಯಾ.” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:70
20 ತಿಳಿವುಗಳ ಹೋಲಿಕೆ  

ಪಿಲಾತನು ಯೇಸುವನ್ನು “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು, ಆತನು, “ನೀನೇ ಹೇಳಿದ್ದೀ” ಎಂದು ಉತ್ತರ ಕೊಟ್ಟನು.


ಪಿಲಾತನು ಆತನನ್ನು, “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು ಆತನು, “ನೀನೇ ಹೇಳಿದ್ದೀ” ಎಂದು ಉತ್ತರಕೊಟ್ಟನು.


ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.


ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.


ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.


ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’


ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.


ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.


ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.


ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.


ಯೇಸುವು “ಹೌದು ನಾನೇ! “ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ” ಎಂದನು.


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.


ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.


ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,


ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.


ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ನಾನೋ?” ಎಂದು ಕೇಳಲು ಯೇಸು ಅವನಿಗೆ, “ನೀನೇ ಹಾಗೆ ಹೇಳಿದ್ದೀ” ಎಂದು ಹೇಳಿದನು.


ಅದಕ್ಕೆ ಅವರು, “ನಮಗೆ ಸಾಕ್ಷಿ ಇನ್ನು ಯಾತಕ್ಕೆ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು