Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದುದರಿಂದ ಯೇಸುಸ್ವಾಮಿ ತಮ್ಮ ಶಿಷ್ಯರಾದ ಪೇತ್ರ ಹಾಗೂ ಯೊವಾನ್ನನನ್ನು ಕರೆದು, “ಹೋಗಿ, ಪಾಸ್ಕಭೋಜನ ಸಿದ್ಧಮಾಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೇಸು ಪೇತ್ರನಿಗೂ ಯೋಹಾನನಿಗೂ - ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ ಎಂದು ಹೇಳಿ ಅವರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೇಸುವು ಪೇತ್ರ ಮತ್ತು ಯೋಹಾನರಿಗೆ, “ಹೋಗಿ, ಪಸ್ಕದ ಊಟವನ್ನು ನಮಗಾಗಿ ಸಿದ್ಧಮಾಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೇಸು ಪೇತ್ರ ಯೋಹಾನರನ್ನು ಕರೆದು, “ನೀವು ಹೋಗಿ ನಮಗೋಸ್ಕರ ಪಸ್ಕಭೋಜನವನ್ನು ಸಿದ್ಧಮಾಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಜೆಜುನ್ ಪೆದ್ರುಕ್, ಅನಿ ಜುವಾಂವಾಕ್ “ಜಾವಾ, ಅನಿ ಅಮ್ಚ್ಯಾ ಪಾಸ್ಕಾಚ್ಯಾ ಜೆವ್ನಾಚಿ ತಯಾರಿ ಕರಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:8
12 ತಿಳಿವುಗಳ ಹೋಲಿಕೆ  

ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.


ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;


ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.


ಗುಣಹೊಂದಿದ ಕುಂಟನು ಪೇತ್ರ ಮತ್ತು ಯೋಹಾನನ್ನು ಹಿಡುಕೊಂಡೇ ಇರುವಾಗ, ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಸೊಲೊಮೋನನದೆಂದು ಹೆಸರುಳ್ಳ ಮಂಟಪಕ್ಕೆ ಒಟ್ಟಾಗಿ ಓಡಿಬಂದರು.


ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.


ಅವರು, “ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ?” ಎಂದು ಆತನನ್ನು ಕೇಳಲು,


ಅವನು ದೇವಾಲಯದೊಳಕ್ಕೆ ಹೋಗುತ್ತಿರುವ ಪೇತ್ರ ಮತ್ತು ಯೋಹಾನರನ್ನು ಕಂಡು ಭಿಕ್ಷೆ ಬೇಡಿದನು.


ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು