Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರು ಕೇಳಿಕೊಂಡ ಪ್ರಕಾರ ಕೊಲೆಕಲಹಗಳ ನಿಮಿತ್ತ ಸೆರೆಯಲ್ಲಿದ್ದ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನಾದರೋ ಅವರ ಇಚ್ಛಾನುಸಾರಕ್ಕೆ ಬಿಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ದಂಗೆ ಕೊಲೆಗಳ ನಿವಿುತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು ಯೇಸುವನ್ನು ಅವರ ಚಿತ್ತಾನುಸಾರ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬರಬ್ಬನನ್ನು ಬಿಡುಗಡೆ ಮಾಡಬೇಕೆಂದು ಜನರು ಕೇಳಿಕೊಂಡರು. ದಂಗೆ ಎಬ್ಬಿಸಿದ್ದರಿಂದ ಮತ್ತು ಕೊಲೆಮಾಡಿದ್ದರಿಂದ ಬರಬ್ಬನು ಸೆರೆಮನೆಯಲ್ಲಿದ್ದನು. ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊಲ್ಲಿಸುವುದಕ್ಕೆ ಜನರಿಗೆ ಒಪ್ಪಿಸಿದನು. ಜನರ ಬಯಕೆಯೂ ಇದೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಪಿಲಾತನು ಜನರು ಬರಬ್ಬನನ್ನು ಎಂದರೆ, ದಂಗೆ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಿದವನನ್ನು ಅವರಿಗೆ ಬಿಟ್ಟುಕೊಟ್ಟು, ಯೇಸುವನ್ನೋ ಅವರ ಇಷ್ಟಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆನಿ ಇಚಾರಲ್ಲ್ಯಾ ಡಂಗೊ ಉಟ್ವುನ್, ಅನಿ ಲೊಕಾಕ್ನಿ ಜಿವಾನಿ ಮಾರುನ್ ಬಂದಿಖಾನ್ಯಾತ್ ಹೊತ್ತ್ಯಾಕ್ ತೆನಿ ಸೊಡುನ್ ದಿಲ್ಯಾನ್, ಅನಿ ತುಮ್ಕಾ ಕಾಯ್ ಪಾಜೆ ತೆ ಕರಾ ಮನುನ್ ಜೆಜುಕ್ ತೆಂಚ್ಯಾ ತಾಬೆತ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:25
12 ತಿಳಿವುಗಳ ಹೋಲಿಕೆ  

ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.


ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.


ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು.


ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು.


“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.


ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.


ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸನು ಇವನೇ; ಯೆಹೋವನು ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾನೆ.


ಆಗ ಪಿಲಾತನು, ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ,


ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ, ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.


ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು.


ಅರಸನು ಹಾಮಾನನಿಗೆ ಕೊಟ್ಟು, “ಆ ಬೆಳ್ಳಿ ನಿನ್ನಲ್ಲೇ ಇರಲಿ; ನೀನು ಆ ಜನರನ್ನು ಏನು ಬೇಕಾದರೂ ಮಾಡಬಹುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು