Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ‘ಕಪಾಲ’ ಎಂಬ ಸ್ಥಳಕ್ಕೆ ಬಂದು ಸೇರಿದ ಮೇಲೆ ಯೇಸುಸ್ವಾಮಿಯನ್ನು ಶಿಲುಬೆಗೆ ಏರಿಸಿದರು. ಆ ಇಬ್ಬರು ಅಪರಾಧಿಗಳಲ್ಲಿ ಒಬ್ಬನನ್ನು ಅವರ ಬಲಗಡೆಯಲ್ಲೂ ಮತ್ತೊಬ್ಬನನ್ನು ಎಡಗಡೆಯಲ್ಲೂ ಶಿಲುಬೆಗೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು, ಒಬ್ಬನನ್ನು ಆತನ ಬಲಗಡೆಯಲ್ಲಿ ಒಬ್ಬನನ್ನು ಆತನ ಎಡಗಡೆಯಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೇಸುವನ್ನು ಮತ್ತು ಇಬ್ಬರು ದುಷ್ಕರ್ಮಿಗಳನ್ನು ಅವರು “ಕಪಾಲ”ವೆಂಬ ಸ್ಥಳಕ್ಕೆ ಕರೆದುಕೊಂಡು ಹೋದರು. ಅಲ್ಲಿ ಸೈನಿಕರು ಯೇಸುವನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗಳಿಗೆ ಜಡಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು “ತಲೆಬುರುಡೆಯ ಸ್ಥಳ” ಎಂದು ಕರೆಯಲಾಗುವ ಸ್ಥಳಕ್ಕೆ ಬಂದಾಗ, ಅಲ್ಲಿ ಯೇಸುವನ್ನು ಶಿಲುಬೆಗೆ ಹಾಕಿದರು. ಆ ಅಪರಾಧಿಗಳಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿ ಮತ್ತೊಬ್ಬನನ್ನು ಅವರ ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಅಶೆ ತೆನಿ “ಟಕ್ಲ್ಯಾಚ್ಯಾ ಬುರ್‍ಡ್ಯಾಚೊ ಜಾಗೊ” ಮನ್ತಲ್ಯಾ ಜಾಗ್ಯಾರ್ ಯೆವ್ನ್ ಪಾವಲ್ಲ್ಯಾ ತನ್ನಾ ತೆನಿ ಜೆಜುಕ್ ಕುರ್ಸಾರ್ ಮಾರ್‍ಲ್ಯಾನಿ, ಅನಿ ತ್ಯಾ ದೊಗ್ಯಾ ಚೊರಾಕ್ನಿ, ಎಕ್ಲ್ಯಾಕ್ ಜೆಜುಚ್ಯಾ ಉಜ್ವ್ಯಾಬಾಜುಕ್, ಅನಿ ಎಕ್ಲ್ಯಾಕ್ ಡಾವ್ಯಾ ಬಾಜುಕ್ ಕುರ್ಸಾರ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:33
19 ತಿಳಿವುಗಳ ಹೋಲಿಕೆ  

ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.


ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು.


ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.


ಇದಲ್ಲದೆ ಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.


ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು” ಎಂದು ಹೇಳಿದನು.


ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು