Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿ, ನಾನೇ ಅಲ್ಲವೇ? ನನ್ನನ್ನು ಮುಟ್ಟಿ ನೋಡಿರಿ, ನೀವು ನನ್ನಲ್ಲಿ ಕಾಣುವಂತೆ, ಮಾಂಸ ಮತ್ತು ಎಲುಬು ಭೂತಕ್ಕೆ ಇರುವುದಿಲ್ಲ,” ಎಂದರು. (

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನನ್ನನ್ನು ಮುಟ್ಟಿನೋಡಿರಿ, ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು; ಅವು ಭೂತಕ್ಕಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನನ್ನ ಕೈಗಳನ್ನು ಮತ್ತು ಪಾದಗಳನ್ನು ನೋಡಿರಿ. ನಾನೇ ಅಲ್ಲವೇ! ನನ್ನನ್ನು ಮುಟ್ಟಿರಿ. ನನ್ನ ಈ ಜೀವಂತ ದೇಹವನ್ನು ನೀವೇ ನೋಡಿರಿ. ಭೂತಕ್ಕೆ ಈ ರೀತಿಯ ದೇಹವಿರುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ. ನಾನೇ ಆತನು! ನನ್ನನ್ನು ಮುಟ್ಟಿ ನೋಡಿರಿ; ನೀವು ಕಾಣುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಮಾಜ್ಯಾ ಹಾತಾಕ್ನಿ, ಅನಿ ಪಾಯಾಕ್ನಿ ಬಗಾ, ಅನಿ ಬರೆ ಕರುನ್ ಬಗಾ, ಮಿಯಾಚ್ ತೊ, ಮಾಕಾ ಅಪ್ಡುನ್ ಬಗಾ ತುಮ್ಕಾ ಕಳ್ತಾ. ಎಕ್ ಭುತಾಕ್ ಮಾಕಾ ಹೊತ್ತ್ಯಾ ಸರ್ಕೆ ಮಾಸ್ ಅನಿ ಹಡ್ಡಾ ರ್‍ಹಾಯ್ನಾತ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:39
12 ತಿಳಿವುಗಳ ಹೋಲಿಕೆ  

ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.


ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.


ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.


ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.


ಅವರು ಬೋರಲುಬಿದ್ದು, “ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ, ಇವರಲ್ಲಿ ದೋಷಿಯಾದವನು ಒಬ್ಬನೇ ಆಗಿರಲಾಗಿ ಸರ್ವಸಮೂಹದವರೆಲ್ಲರ ಮೇಲೆ ಕೋಪಗೊಳ್ಳಬಹುದೋ?” ಎಂದು ಬಿನ್ನೈಸಿದನು.


ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?


ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು.


ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.


ಆ ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.


ಆತನು ಅವರಿಗೆ, “ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಅನುಮಾನಗಳು ಹುಟ್ಟುವುದೇಕೆ?


ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು