Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6-7 ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ. ಆತನು ಇನ್ನೂ ಗಲಿಲಾಯದಲ್ಲಿದ್ದಾಗ, ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು, ಶಿಲುಬೆಗೆ ಹಾಕಲ್ಪಟ್ಟು, ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವುದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಗಲಿಲೇಯದಲ್ಲಿದ್ದಾಗಲೇ ಅವರು ನಿಮಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6-7 ಆತನು ಇನ್ನೂ ಗಲಿಲಾಯದಲ್ಲಿದ್ದಾಗ - ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು ಇಲ್ಲಿಲ್ಲ. ಆತನು ಜೀವಂತವಾಗಿ ಎದ್ದಿದ್ದಾನೆ! ಆತನು ಗಲಿಲಾಯದಲ್ಲಿದ್ದಾಗ ಹೇಳಿದ ವಿಷಯ ಜ್ಞಾಪಕವಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಇಲ್ಲಿಲ್ಲ; ಜೀವಂತರಾಗಿ ಎದ್ದಿದ್ದಾರೆ! ಅವರು ಇನ್ನೂ ಗಲಿಲಾಯದಲ್ಲಿದ್ದಾಗಲೇ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೊ ಹಿತ್ತೆ ನಾ ತೆಕಾ ಝಿತ್ತೊ ಕರುನ್ ಉಟ್ವುನ್ ಹೊಲಾ. ಗಾಲಿಲಿಯಾತ್ ಹೊತ್ತ್ಯಾ ತನ್ನಾ ತೆನಿ ತುಮ್ಕಾ ಕಾಯ್ ಸಾಂಗಟಲ್ಲ್ಯಾನ್ ಮನುನ್ ಯಾದ್ ಕರುನ್ ಘೆವಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:6
19 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.


ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.


ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ;


“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು.


“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;


ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.


ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.


ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,


ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು?


“ಕರ್ತನು ಎದ್ದದ್ದು ನಿಜ. ಆತನು ಸೀಮೋನನಿಗೆ ಕಾಣಿಸಿಕೊಂಡನು” ಎಂದು ಹೇಳುತ್ತಿದ್ದರು.


ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.


ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು