Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು, “ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ” ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೋಹಾನನು, “ನಿಮ್ಮಲ್ಲಿ ಎರಡು ಅಂಗಿಗಳಿದ್ದರೆ, ಏನೂ ಇಲ್ಲದವನಿಗೆ ಒಂದು ಕೊಡಿರಿ. ನಿಮ್ಮಲ್ಲಿ ಆಹಾರವಿದ್ದರೆ, ಅದನ್ನೂ ಹಂಚಿಕೊಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಯೋಹಾನನು ಉತ್ತರವಾಗಿ, “ಎರಡು ಅಂಗಿಗಳಿದ್ದರೆ ಇಲ್ಲದವನಿಗೆ ಒಂದನ್ನು ಕೊಡಲಿ, ಆಹಾರವುಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆನಿ ತೆಂಕಾ “ಕೊನಾಕ್ಡೆ ದೊನ್ ಅಂಗಿಯಾ ಹಾತ್, ತೊ ಕಾಯ್ಬಿನಸಲ್ಲ್ಯಾಕ್ ಎಕ್ ಅಂಗಿ ದಿಂವ್ದಿ, ಅನಿ ಕೊನಾಕ್ಡೆ ಜೆವ್ಕ್ ಹಾಯ್, ತೊ ವಾಟುನ್ ಘೆವ್ನ್ ಖಾಂವ್ದಿ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:11
22 ತಿಳಿವುಗಳ ಹೋಲಿಕೆ  

ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?


ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.


ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?


ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.


ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.


ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.


ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.


ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.


ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು.


ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.


ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,


ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.


ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು