Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4-6 ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನೆಂದರೆ, “‘ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವುದು, ಡೊಂಕಾಗಿರುವಂಥದು ನೆಟ್ಟಗಾಗುವುದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದಾಗುವ ರಕ್ಷಣೆಯನ್ನು ಕಾಣುವರು’ ಎಂಬುದಾಗಿ ಮರುಭೂಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ಬಗ್ಗೆ ಪ್ರವಾದಿ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿಯೇ ಹೀಗೆಂದು ಬರೆದಿಡಲಾಗಿದೆ : “ ‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ’ ಎಂದು ಬೆಂಗಾಡಿನಲ್ಲಿ ಒಬ್ಬನು ಘೋಷಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4-6 ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನಂದರೆ - ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, ಡೊಂಕಾಗಿರುವಂಥದು ನೀಟಾಗುವದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದ ಸಿದ್ಧವಾಗುವ ರಕ್ಷಣೆಯನ್ನು ಕಾಣುವರು ಎಂಬದಾಗಿ ಅಡವಿಯಲ್ಲಿ ಕೂಗುವವನ ಶಬ್ಧವದೆ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಶಾಯ ಪ್ರವಾದಿಯು ತನ್ನ ಗ್ರಂಥದಲ್ಲಿ ಬರೆದಿರುವಂತೆಯೇ ಇದು ನಡೆಯಿತು. ಅದೇನೆಂದರೆ: “‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಮಾಡಿರಿ. ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದರ ಬಗ್ಗೆ ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿ ಹೀಗೆಂದು ಬರೆದಿದೆ: “ಅರಣ್ಯದಲ್ಲಿ ಕೂಗುವವನ ಸ್ವರವು, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಇಸಾಯಿಯಾ ಪ್ರವಾದ್ಯಾಚ್ಯಾ ಪುಸ್ತಕಾತ್: “ಡಂಗ್ಳಿತ್ ಎಕ್ಲೊ ಬೊಬ್ ಮಾರ್‍ತಾ, ಧನಿಯಾಸಾಟ್ನಿ ವಾಟ್ ತಯಾರ್ ಕರುನ್ ಥವಾ” “ತೆಕಾ ಯೆವ್ಕ್ ಎಕ್ ನಿಟ್ ವಾಟ್ ತಯಾರ್ ಕರಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:4
12 ತಿಳಿವುಗಳ ಹೋಲಿಕೆ  

ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು.


ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.


“‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಮಾರ್ಗವನ್ನು ಸರಾಗ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವಿದೆ” ಎಂಬುದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ.


ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.”


ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!


“‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.


“ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು