Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ. ‘ಅಬ್ರಹಾಮನೇ ನಮ್ಮ ಪಿತಾಮಹ,’ ಎಂದು ನಿಮ್ಮ ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ; ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತಿಯಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲಗಳಿಂದ ತೋರಿಸಿರಿ. ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂದು ನಿಮ್ಮೊಳಗೆ ಅಂದುಕೊಳ್ಳುವವರಾಗಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿರುವುದಾದರೆ ಅದನ್ನು ನಿಮ್ಮ ತಕ್ಕಕಾರ್ಯಗಳಿಂದ ತೋರಿಸಿರಿ. ‘ಅಬ್ರಹಾಮನು ನಮ್ಮ ತಂದೆ’ ಎಂದು ಜಂಬ ಕೊಚ್ಚಿಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಇಲ್ಲಿರುವ ಕಲ್ಲುಗಳಿಂದ ಮಕ್ಕಳನ್ನು ಕೊಡಬಲ್ಲನೆಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಾಗಾದರೆ ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತುಮಿ ತುಮ್ಚ್ಯಾ ಪಾಪಾನಿತ್ನಾ, ಬರ್‍ಯಾ ವಾಟೆಕ್ ಪರತ್ಲ್ಯಾಶಿ, ಮನುನ್ ದಾಕ್ವುನ್ ದಿತಲಿ ಕಾಮಾ ಕರಾ, ಅನಿ ತುಮ್ಚ್ಯಾ-ತುಮ್ಚ್ಯಾ ಮದ್ದಿ ಅಮ್ಚೊ ಅದ್ಲೊ ಬಾಬಾ ಅಬ್ರಾಹಾಮ್ ಹಾಯ್, ಮನುನ್ ಸಾಂಗುಕ್ ಜಾವ್‍ನಕಾಶಿ. ಅಬ್ರಾಹಾಮಾಕ್ ಹ್ಯಾ ಗುಂಡ್ಯಾನಿತ್ನಾ ಸೈತ್ ಪಿಳ್ಗಿ ಕರುನ್ ದಿವ್ಕ್ ದೆವಾಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:8
29 ತಿಳಿವುಗಳ ಹೋಲಿಕೆ  

ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಆದುದರಿಂದ ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲಾಗುವುದು.


ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.


ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು.


ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.


ಆತನು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು” ಎಂದು ನಿಮಗೆ ಹೇಳುತ್ತೇನೆ ಅಂದನು.


ಅದಕ್ಕವರು ಆತನಿಗೆ, “ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.


ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ.


“ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ.


ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.


ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.


ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು.


ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು


ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ.


ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ.


ಇದನ್ನು ಕೇಳಿ ಯೇಸು, “ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ.


ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂರಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈ ಹೊತ್ತೇ ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು