Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಪವಿತ್ರ್ ಆತ್ಮೊ ಮಾಜೆ ವರ್‍ತಿ ಹಾಯ್ ಕಶ್ಯಾಕ್ ಮಟ್ಲ್ಯಾರ್ ಗರಿಬಾಕ್ನಿ ಬರಿ ಖಬರ್ ಹಾನುಕ್ ಮನುನ್, ತೆನಿ ಮಾಕಾ ಎಚುನ್ ಕಾಡ್ಲ್ಯಾನಾಯ್. ಗುಲಾಮ್ಗಿರಿತ್ ಹೊತ್ತ್ಯಾಕ್ನಿ ಸುಟ್ಕಾ ಯೆಲಾ, ಅನಿ ಕುಡ್ಡಾಕ್ನಿ ದಿಸ್ಟ್ ಯೆಲಾ ಮನುನ್ ಸಾಂಗುಕ್ ತೆನಿ ಮಾಕಾ ಧಾಡುನ್ ದಿಲ್ಯಾನಾಯ್. ಅಡ್ಚನಿತ್ ಹೊತ್ತ್ಯಾಕ್ನಿ ಸುಟ್ಕಾ ದಿತಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:18
56 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,


ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.


ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.


ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.


ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.


ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.


ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.


“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.


ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.


ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.


ಸೆರೆಯವರ ಗೋಳಾಟವನ್ನು ಪರಿಗಣಿಸಿ, ಮರಣಪಾತ್ರರನ್ನು ಬಿಡಿಸಿ,


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು.


ನಾನು ಕೋರೆಷನನ್ನು ಧರ್ಮೋದ್ದೇಶದಿಂದ ಉನ್ನತಿಗೆ ತಂದು ನೇಮಿಸಿದ್ದೇನೆ. ಅವನ ಮಾರ್ಗಗಳನ್ನೆಲ್ಲಾ ಸರಾಗಮಾಡುವೆನು. ಅವನು ನನ್ನ ಪಟ್ಟಣವನ್ನು ತಿರುಗಿ ಕಟ್ಟಿ ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ ಸೆರೆಯಾದ ನನ್ನ ಜನರನ್ನು ಬಿಡುಗಡೆ ಮಾಡುವೆನು’” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ.


ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.


“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.


ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು,


ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,


ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ,


ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು.


ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.


ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು, ಇದು ಯೆಹೋವನ ನುಡಿ ಎಂದು ತಿಳಿದುಕೊಂಡವು.


ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,


ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


“ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


“ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.


ಆಗ ಯೆಶಾಯನೆಂಬ ಪ್ರವಾದಿಯು ಬರೆದ ಗ್ರಂಥದ ಸುರುಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರುಳಿಯನ್ನು ಬಿಚ್ಚಿದಾಗ ಬರೆದಿರುವ ಈ ಭಾಗವನ್ನು ಕಂಡು ಓದಿದನು; ಅಲ್ಲಿ ಹೀಗೆ ಬರೆದಿತ್ತು,


ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು