Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಅನೇಕರ ಮೈಮೇಲಿದ್ದ ದೆವ್ವಗಳು ಸಹ, “ನೀವು ದೇವರ ಪುತ್ರ,” ಎಂದು ಬೊಬ್ಬೆಹಾಕುತ್ತಾ ಬಿಟ್ಟುಹೋದುವು. ಇವರೇ ‘ಕ್ರಿಸ್ತ’ ಎಂದು ಅವುಗಳು ತಿಳಿದಿದ್ದರಿಂದ ಯೇಸು ಅವುಗಳನ್ನು ಗದರಿಸಿ ಮಾತೆತ್ತಲು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ದೆವ್ವಗಳು ಸಹ - ನೀನು ದೇವರ ಕುಮಾರನು ಎಂದು ಅಬ್ಬರಿಸಿ ಅನೇಕರನ್ನು ಬಿಟ್ಟು ಹೋದವು. ತಾನು ಕ್ರಿಸ್ತನೆಂದು ಅವುಗಳಿಗೆ ತಿಳಿದದ್ದರಿಂದ ಆತನು ಅವುಗಳನ್ನು ಮಾತಾಡದಂತೆ ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಅನೇಕ ಜನರೊಳಗಿಂದ ದೆವ್ವಗಳು, “ನೀನು ದೇವಕುಮಾರ” ಎಂದು ಆರ್ಭಟಿಸುತ್ತಾ ಬಿಟ್ಟುಹೋದವು. ಆದರೆ ಯೇಸು ಆ ದೆವ್ವಗಳಿಗೆ, “ಮಾತಾಡಕೂಡದೆಂದು” ಬಲವಾಗಿ ಆಜ್ಞಾಪಿಸಿದನು. ಯೇಸುವೇ “ಕ್ರಿಸ್ತ”ನೆಂದು ದೆವ್ವಗಳಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಅನೇಕರೊಳಗಿಂದ, ದೆವ್ವಗಳು ಸಹ ಹೊರಗೆ ಬಂದು, “ನೀವು ದೇವರ ಪುತ್ರ” ಎಂದು ಅರಚಿದವು. ಯೇಸು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದರು. ಏಕೆಂದರೆ ಅವರೇ ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಸುಮಾರ್ ಲೊಕಾನಿತ್ನಾ ಗಿರೆಬಿ ಭಾಯ್ರ್ ಗೆಲಿ. ಅನಿ ಗಿರೆ “ತಿಯಾ ದೆವಾಚೊ ಲೆಕ್” ಮನುನ್ ಬೊಬ್ ಮಾರುಕ್ ಲಾಗಲ್ಲಿ, ಜೆಜುನ್ ತ್ಯಾ ಗಿರ್‍ಯಾಕ್ನಿ ಬೊಲುಕ್ ದಿವ್ಕ್ ನಾ ಕಶ್ಶಾಕ್ ಮಟ್ಲ್ಯಾರ್, ತೊ ಮೆಸ್ಸಿಯಾ ಮನುನ್ ತೆಂಕಾ ಗೊತ್ತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:41
14 ತಿಳಿವುಗಳ ಹೋಲಿಕೆ  

ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.


ದೇವರು ಒಬ್ಬನೇ ಎಂದು ನೀನು ನಂಬುತ್ತೀ; ಹಾಗೆ ನಂಬುವುದು ಸರಿ. ಆದರೆ ದೆವ್ವಗಳು ಸಹ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.


ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.


ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು.


ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,


ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.


ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.


ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು.


ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;” ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.


ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.


ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.


ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು