Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯ ಕಡೆ ನೋಡಿ, “ ‘ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೊರಡು,’ ಎಂದು ನಿನಗೆ ಆಜ್ಞಾಪಿಸುತ್ತೇನೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ಪಾಪಗಳನ್ನು ಕ್ಷವಿುಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗದವನನ್ನು ನೋಡಿ - ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವ ಅಧಿಕಾರ ಉಂಟೆಂಬುದು ನಿಮಗೆ ಖಚಿತವಾಗಬೇಕು” ಎಂದು ಹೇಳಿ, ಪಾರ್ಶ್ವವಾಯು ರೋಗಿಗೆ, “ಏಳು! ನಿನ್ನ ಹಾಸಿಗೆಯನ್ನು ಹೊತ್ತುಕೊಂಡು ಮನೆಗೆ ಹೋಗು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತಸೆ ಜಾಲ್ಯಾರ್, ಮಾನ್ಸಾಚ್ಯಾ ಲೆಕಾಕ್ ಹ್ಯಾ ಜಗಾತ್ ಪಾಪ್ ಮಾಪಿ ಕರ್‍ತಲೊ ಅದಿಕಾರ್‍ಬಿ ಹಾಯ್, ಮನುನ್ ಮಿಯಾ ತುಮ್ಕಾ ದಾಕ್ವುನ್ ದಿತಾ. ಮನುನ್ ತ್ಯಾ ವಾರೆಮಾರಲ್ಲ್ಯಾಕ್, ತೆನಿ “ಮಿಯಾ ಸಾಂಗ್ತಾ ಉಟ್, ಘೆ ತುಜೆ ಹಾತ್ರಾನ್, ಅನಿ ಘರಾಕ್ ಚಲ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:24
26 ತಿಳಿವುಗಳ ಹೋಲಿಕೆ  

ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


“ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ” ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು.


ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.


ಪೇತ್ರನು ಅವನಿಗೆ, “ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ” ಎಂದು ಹೇಳಿದನು. ಕೂಡಲೆ ಅವನು ಎದ್ದನು.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ನೀನು ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.


ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.


ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ.


ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.


ಆದರೆ ಆತನು ಆಕೆಯ ಕೈ ಹಿಡಿದು, “ಮಗಳೇ, ಎದ್ದೇಳು” ಎಂದು ಕೂಗಿ ಹೇಳಿದನು.


ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು.


ಆತನು ಕೈನೀಡಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು, ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.


ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.


“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;


ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು.


ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು.


ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.


ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗಿಯನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು. ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರು.


ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ? ಎದ್ದು ನಡೆ ಅನ್ನುವುದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು