Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವರು ನೀವೋ ಅಥವಾ ಬೇರೊಬ್ಬನಿಗಾಗಿ ನಾವು ಎದುರು ನೋಡಬೇಕೋ?” ಎಂದು ಯೇಸುಸ್ವಾಮಿಯನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಸ್ವಾವಿುಗೆ ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?” ಎಂದು ಕೇಳುವುದಕ್ಕಾಗಿ ಅವರನ್ನು ಪ್ರಭುವಿನ (ಯೇಸುವಿನ) ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದ ಕ್ರಿಸ್ತನು ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ಕರ್ತದೇವರನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆನಿ ತೆಂಚ್ಯಾತ್ಲ್ಯಾ ದೊಗ್ಯಾಕ್ನಿ ಬಲ್ವುನ್, ಜೆಜುಕ್ಡೆ ಜಾವ್ನ್ “ಜುವಾಂವಾನ್ ಯೆತಲೊ ಹಾಯ್, ಮನುನ್ ಸಾಂಗಲ್ಲೊ ತಿಯಾಚ್ ಕಾಯ್, ಅಮಿ ಅಜುನ್ ಕೊನಾಚಿ ವಾಟ್ ರಾಕುಚೆ?” ಮನುನ್ ಇಚಾರಾ ಮನುನ್ ಸಾಂಗುನ್ ಧಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:19
38 ತಿಳಿವುಗಳ ಹೋಲಿಕೆ  

ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,


ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


ಇಷಯನ ಬೇರಿನಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಹೊರಟ ಕೊಂಬೆಯು ಫಲಿಸುವುದು.


ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ “ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ” ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”


ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು,


ಕರ್ತನು ಆಕೆಯನ್ನು ಕಂಡು ಕನಿಕರಿಸಿ, “ಅಳಬೇಡ” ಎಂದು ಆಕೆಗೆ ಹೇಳಿ,


ಅವರು ಯೇಸುವಿನ ಬಳಿಗೆ ಬಂದು, “‘ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಅಂದರು.


ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು.


ಆದರೆ ಕರ್ತನು ಅವನಿಗೆ, “ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.


ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?


ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.


ಅಪೊಸ್ತಲರು ಕರ್ತನಿಗೆ, “ನಮ್ಮ ನಂಬಿಕೆಯನ್ನು ಹೆಚ್ಚಿಸು” ಎಂದು ಹೇಳಲು,


ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು.


ಕರ್ತನು ಈ ಸಾಮ್ಯವನ್ನು ಹೇಳಿದ ಮೇಲೆ, “ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ.


ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.


ಕರ್ತನು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು, “ಈಹೊತ್ತು ಕೋಳಿ ಕೂಗುವುದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ” ಎಂದು ಕರ್ತನು ನುಡಿದ ಮಾತನ್ನು ನೆನಪಿಸಿಕೊಂಡು,


“ಕರ್ತನು ಎದ್ದದ್ದು ನಿಜ. ಆತನು ಸೀಮೋನನಿಗೆ ಕಾಣಿಸಿಕೊಂಡನು” ಎಂದು ಹೇಳುತ್ತಿದ್ದರು.


ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,


ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.


ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು