Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಕಂಡದ್ದನ್ನೂ ಕೇಳಿದ್ದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗಿರಲು ಆತನು ಅವರಿಗೆ ಪ್ರತ್ಯುತ್ತರವಾಗಿ - ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರಿಗೆ ಕಣ್ಣು ಬರುತ್ತವೆ, ಕುಂಟರಿಗೆ ಕಾಲು ಬರುತ್ತವೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರಿಗೆ ಕಿವಿ ಬರುತ್ತವೆ, ಸತ್ತವರು ಜೀವವನ್ನು ಹೊಂದುತ್ತಾರೆ, ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಳಿಕ ಯೇಸು ಯೋಹಾನನ ಶಿಷ್ಯರಿಗೆ, “ನೀವು ಇಲ್ಲಿ ಕಂಡು ಕೇಳಿದ ಸಂಗತಿಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ. ಕುರುಡರಿಗೆ ದೃಷ್ಟಿ ಬರುತ್ತದೆ, ಕುಂಟರು ಕಾಲನ್ನು ಪಡೆದು ನಡೆಯುತ್ತಾರೆ. ಕುಷ್ಠರೋಗಿಗಳು ಗುಣಹೊಂದುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರಿಗೆ ಜೀವ ಬರುತ್ತದೆ ಮತ್ತು ದೇವರ ರಾಜ್ಯದ ಸುವಾರ್ತೆಯು ಬಡವರಿಗೆ ಕೊಡಲ್ಪಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ತರುವಾಯ ಯೇಸು ಅವರಿಗೆ, “ನೀವು ಕಂಡು ಕೇಳಿದವುಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆಜುನ್ ಜುವಾಂವಾಚ್ಯಾ ಶಿಸಾಕ್ನಿ “ಜಾಂವಾ, ಅನಿ ಹಿತ್ತೆ ಬಗಟಲ್ಲೆ, ಅನಿ ಆಯ್ಕಲ್ಲೆ, ಜುವಾಂವಾಕ್ ಸಾಂಗಾ: ಕುಡ್ಡೆ ಬಗ್ತ್ಯಾತ್, ಸೊಟ್ಟೊ ಚಲ್ತಾ, ಕುಸ್ಟ್ ರೊಗ್ ಹೊತ್ತೆ ಪವಿತ್ರ್ ಹೊತ್ಯಾತ್, ಕಿಂವ್ಡೆ ಆಯಿಕ್ತ್ಯಾತ್, ಮರಲ್ಲೆ ಝಿತ್ತೆ ಹೊತ್ಯಾತ್, ಅನಿ ಗರಿಬಾಕ್ನಿ ಬರಿ ಖಬರ್ ಸಾಂಗುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:22
31 ತಿಳಿವುಗಳ ಹೋಲಿಕೆ  

“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ


ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು.


ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು,


ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.


ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ.


ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.


ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.


ನಾನು ಕುರುಡನಿಗೆ ಕಣ್ಣಾಗಿಯೂ, ಕುಂಟನಿಗೆ ಕಾಲಾಗಿಯೂ ಇದ್ದೆನು.


ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.


ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು.


ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.


ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು