Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಆದ್ದರಿಂದ ನೀವು ಕಿವಿಕೊಡುವಾಗ ಎಚ್ಚರಿಕೆಯಿಂದಿರಿ; ಏಕೆಂದರೆ, ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ; ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ನೀವು ಕಿವಿಗೊಡುವಾಗ ಜಾಗರೂಕರಾಗಿರಿ; ಸ್ವಲ್ಪ ತಿಳುವಳಿಕೆ ಇರುವ ವ್ಯಕ್ತಿಯು ಹೆಚ್ಚು ತಿಳುವಳಿಕೆಯನ್ನು ಹೊಂದುವನು. ಆದರೆ ತಿಳುವಳಿಕೆ ಇಲ್ಲದ ವ್ಯಕ್ತಿಯು ತನಗಿದೆ ಎಂದುಕೊಂಡಿದ್ದ ತಿಳುವಳಿಕೆಯನ್ನೂ ಕಳೆದುಕೊಳ್ಳುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ನೀವು ಕೇಳುವ ವಿಷಯಗಳಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು; ಇಲ್ಲದವರ ಕಡೆಯಿಂದ ತಮಗಿದೆ ಎಂದುಕೊಳ್ಳುವುದನ್ನು ಸಹ, ಅವರಿಂದ ಕಿತ್ತುಕೊಳ್ಳಲಾಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆಚೆಸಾಟ್ನಿ, “ಉಶಾರ್ಕಿನ್ ರ್‍ಹಾವಾ ಅನಿ ಬರೆ ಕರುನ್ ಆಯ್ಕಾ; ಕಶ್ಯಾಕ್ ಮಟ್ಲ್ಯಾರ್, ಕೊನಾಕ್ಡೆ ಕಾಯ್ತರ್ ಉಲ್ಲೆಸೆ ಹಾಯ್ ತೆಕಾ ಜಾಸ್ತಿಚೆ ದಿವ್ನ್ ಹೊತಾ, ಖರೆ ಕೊನಾಕ್ಡೆ ಉಲ್ಲೆಸೆಬಿ ನಾ, ತೆಚೆಕ್ಲೆ ಅಸಲ್ಲೆಬಿ ಉಲ್ಲೆಸೆ ಕಾಡುನ್ ಘೆವ್ನ್ ಜಾವ್ನ್ ಹೊತಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:18
25 ತಿಳಿವುಗಳ ಹೋಲಿಕೆ  

ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.


ಅದಕ್ಕವನು, ‘ಇದ್ದವರಿಗೆಲ್ಲಾ ಕೊಡಲ್ಪಡುವುದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು’ ಎಂದು ನಾನು ನಿಮಗೆ ಹೇಳುತ್ತೇನೆ


ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.


ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.


ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.


ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.


ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”


ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.


ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.


ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು.


“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು.


ನಾನಾದರೋ ಶರೀರಸಂಬಂಧವಾದವುಗಳಲ್ಲಿ ಭರವಸವಿಡುವುದಕ್ಕೂ ಆಸ್ಪದವಿದೆ. ಬೇರೆ ಯಾವನಾದರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಡಬಹುದೆಂದು ಯೋಚಿಸುವುದಾದರೆ ನಾನು ಅವನಿಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.


“ಇದಲ್ಲದೆ ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.


ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು