Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಶಿಷ್ಯರು ಬಂದು ಯೇಸುವನ್ನು ಎಬ್ಬಿಸಿ, “ಸ್ವಾಮೀ, ಸ್ವಾಮೀ, ನಾವು ಸಾಯುತ್ತಿದ್ದೇವೆ,” ಎಂದರು. ಯೇಸು ಎಚ್ಚೆತ್ತು ಬಿರುಗಾಳಿಯನ್ನೂ ಭೋರ್ಗರೆಯುತ್ತಿದ್ದ ಅಲೆಗಳನ್ನೂ ಗದರಿಸಿದರು. ಅವು ಸ್ತಬ್ಧವಾದವು. ವಾತಾವರಣ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೀಗಿರಲಾಗಿ ಅವರು ಆತನ ಹತ್ತಿರ ಬಂದು - ಗುರುವೇ, ಗುರುವೇ, ಸಾಯುತ್ತೇವೆ ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಉಬ್ಬುವ ನೀರನ್ನೂ ಗದರಿಸಿದನು. ಗದರಿಸಲು ಅವು ನಿಂತವು, ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಗ ಶಿಷ್ಯರು ಯೇಸುವಿನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಗುರುವೇ! ಗುರುವೇ! ನಾವು ಮುಳುಗಿಹೋಗುತ್ತಿದ್ದೇವೆ!” ಎಂದು ಹೇಳಿದರು. ಕೂಡಲೇ ಯೇಸು ಎದ್ದು, ಆ ಗಾಳಿಗೂ ತೆರೆಗಳಿಗೂ ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತಿತು ಮತ್ತು ಸರೋವರ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, “ಗುರುವೇ, ಗುರುವೇ, ನಾವು ಮುಳುಗುತ್ತಿದ್ದೇವೆ!” ಎಂದರು. ಆಗ ಯೇಸು ಎದ್ದು ಬಿರುಗಾಳಿಯನ್ನೂ ರಭಸವಾಗಿ ಬರುತ್ತಿದ್ದ ಅಲೆಗಳನ್ನೂ ಗದರಿಸಿದರು; ಆಗ ಬಿರುಗಾಳಿಯು ನಿಂತು ಹೋಗಿ, ಎಲ್ಲಾ ಪ್ರಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ಶಿಸಾ ಜೆಜುಕ್ ಗೆಲಿ ಅನಿ ತೆಕಾ ಉಟ್ವುನ್ “ಗುರುಜಿ, ಗುರುಜಿ, ಅಮಿ ಬುಡುನ್ ಮರ್‍ತಾಂವ್?” ಮನುಲಾಲೆ. ತನ್ನಾ ಜೆಜು ಉಟ್ಲೊ, ಅನಿ ವಾರ್ಯಾಕ್, ಅನಿ ಲ್ಹಾಟಾಕ್ನಿ ತೆನಿ ಹುಕುಮ್ ದಿಲ್ಯಾನ್. ತನ್ನಾ ವಾರೊ ಅನಿ ಲ್ಹಾಟಾ ಗಪ್ ರ್‍ಹಾಲಿ, ಅನಿ ಸಗ್ಳೆ ಎಗ್ದಮ್ ಶಾಂತ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:24
19 ತಿಳಿವುಗಳ ಹೋಲಿಕೆ  

ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು.


ಅದಕ್ಕೆ ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯತ್ನಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಬೀಸುತ್ತೇವೆ” ಅಂದನು.


ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.


ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.


ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು.


ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, “ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ” ಎಂದರು.


ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.


ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.


ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು