Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆತನು, “ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು” ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆದರೆ ಯೇಸು, “ನಿನ್ನ ಮನೆಗೆ ಹಿಂದಿರುಗಿಹೋಗು, ದೇವರು ನಿನಗೆ ಎಂಥಾ ಉಪಕಾರ ಮಾಡಿದ್ದಾರೆಂಬುದನ್ನು ಪ್ರಕಟಿಸು,” ಎಂದು ಅವನನ್ನು ಬೀಳ್ಕೊಟ್ಟರು. ಅವನು ಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ಊರಿನಲ್ಲೆಲ್ಲಾ ಪ್ರಚಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆತನು - ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥೆಂಥ ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ವಿವರವಾಗಿ ಹೇಳು ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಅದಕ್ಕೆ ಯೇಸು, “ನಿನ್ನ ಮನೆಗೆ ಹಿಂತಿರುಗಿ ಹೋಗು. ದೇವರು ನಿನಗೆ ಮಾಡಿದ ಉಪಕಾರವನ್ನು ಜನರಿಗೆ ತಿಳಿಸು” ಎಂದು ಹೇಳಿ ಅವನನ್ನು ಕಳುಹಿಸಿದನು. ಆದ್ದರಿಂದ ಆ ಮನುಷ್ಯನು ಅಲ್ಲಿಂದ ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರವನ್ನು ಊರಲ್ಲೆಲ್ಲಾ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ನೀನು ನಿನ್ನ ಮನೆಗೆ ಹಿಂದಿರುಗಿ ಹೋಗಿ ದೇವರು ನಿನಗೆ ಎಂಥಾ ಮಹಾಕಾರ್ಯಗಳನ್ನು ಮಾಡಿದ್ದಾರೆಂಬುದನ್ನು ಹೇಳು,” ಎಂದು ಅವನನ್ನು ಕಳುಹಿಸಿಬಿಟ್ಟರು. ಅವನು ತನ್ನ ಮಾರ್ಗವಾಗಿ ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ಊರೆಲ್ಲಾ ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಅನಿ “ತುಜ್ಯಾ ಘರಾಕ್ ಜಾ, ಅನಿ ತುಜ್ಯಾ ಘರಾತ್ಲ್ಯಾಕ್ನಿ ದೆವಾನ್ ಕಾಯ್-ಕಾಯ್ ಕರ್‍ಲ್ಯಾನ್ ತೆ ಸಾಂಗ್”, ಮನುನ್ ಸಾಂಗ್ಲ್ಯಾನ್. ತೊ ಮಾನುಸ್ ಶಾರಾತ್ ಗೆಲೊ,ಅನಿ ಜೆಜುನ್ ಅಪ್ನಾಕ್ ಕಾಯ್-ಕಾಯ್ ಕರಲ್ಲೆ ಸಗ್ಳೆ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:39
13 ತಿಳಿವುಗಳ ಹೋಲಿಕೆ  

ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.


“ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?” ಎಂದು ಹೇಳಿದಳು.


ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.


ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.


ಎಲ್ಲಾ ದೇವಭಕ್ತರೇ, ಬಂದು ಕೇಳಿರಿ; ಆತನು ನನಗಾಗಿ ಮಾಡಿದ್ದೆಲ್ಲವನ್ನು ನಿಮಗೆ ತಿಳಿಸುವೆನು.


ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು.


ಆದರೆ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ, “ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು” ಅಂದನು.


ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು, ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ,


ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು