Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಯೇಸುಸ್ವಾಮಿ ಹಿಂದಿರುಗಿ ಬಂದುದೇ, ದಡದಲ್ಲಿ ಎದುರುನೋಡುತ್ತಿದ್ದ ಜನಸಮೂಹವು ಅವರನ್ನು ಸ್ವಾಗತಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನನ್ನು ಕಾದುಕೊಂಡಿದ್ದು ಸಂತೋಷದಿಂದ ಸ್ವೀಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಯೇಸು ಗಲಿಲಾಯಕ್ಕೆ ಹಿಂತಿರುಗಿದಾಗ ಜನರು ಆತನನ್ನು ಸ್ವಾಗತಿಸಿದರು. ಪ್ರತಿಯೊಬ್ಬರೂ ಆತನಿಗಾಗಿ ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯೇಸು ಹಿಂತಿರುಗಿ ಬಂದಾಗ ಅವರ ಬರುವಿಕೆಯನ್ನು ಎದುರುನೋಡುತ್ತಿದ್ದ ಜನರೆಲ್ಲರೂ ಅವರನ್ನು ಸ್ವಾಗತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಜೆಜು ಸಮುಂದರಾಚ್ಯಾ ಅನಿಎಕ್ ದಂಡೆಕ್ ಪರ್ತುನ್ ಯೆಲ್ಲ್ಯಾ ತನ್ನಾ, ಲೊಕಾನಿ ತೆಕಾ ಸ್ವಾಗತ್ ಕರ್‍ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್, ತೆನಿ ತೆಚಿ ವಾಟ್ ರಾಕುನ್ಗೆತ್ ಹೊತ್ತ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:40
12 ತಿಳಿವುಗಳ ಹೋಲಿಕೆ  

ಯೇಸು ತಿರುಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.


ಯೇಸು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು.


ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು.


ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.


ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.


ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು.


ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.


ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು.


ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಿಲಿನ ನಿಲವುಗಳ ಹತ್ತಿರವಿದ್ದು, ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.


ಆತನು, “ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಏನೇನು ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ನಿನ್ನವರಿಗೆ ವಿವರವಾಗಿ ಹೇಳು” ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು