Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಆಕೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು. ಆ ಕ್ಷಣವೇ ಅವಳ ರಕ್ತಸ್ರಾವವು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆಕೆಯು ಒಬ್ಬರಿಂದಲೂ ಗುಣ ಹೊಂದಲಾರದೆ ಇದ್ದಳು. ಆಕೆಯು ಹಿಂದಿನಿಂದ ಬಂದು ಆತನ ಉಡುಪಿನ ಗೊಂಡೆಯನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತ ಹರಿಯುವದು ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಆ ಸ್ತ್ರೀಯು ಯೇಸುವಿನ ಹಿಂದೆ ಬಂದು ಆತನ ನಿಲುವಂಗಿಯ ಕೆಳಭಾಗವನ್ನು ಮುಟ್ಟಿದಳು. ಆ ಕ್ಷಣವೇ ಆಕೆಯ ರಕ್ತಸ್ರಾವ ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಅವಳು ಯೇಸುವಿನ ಹಿಂದೆ ಬಂದು ಅವರ ಉಡುಪಿನ ಅಂಚನ್ನು ಮುಟ್ಟಿದಳು, ಕೂಡಲೇ ಆಕೆಯ ರಕ್ತಸ್ರಾವವು ನಿಂತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ತಿ ಜೆಜುಚ್ಯಾ ಫಾಟಿ ಯೆಲಿ ಅನಿ ತೆನಿ ಜೆಜುಚ್ಯಾ ಆಂಗಾ ವೈಲ್ಯಾ ಕಪ್ಡ್ಯಾಚ್ಯಾ ತುದಿಚ್ಯಾ ಘೊಂಡ್ಯಾಕ್ ತೆನಿ ಹಾತ್ ಲಾವ್ಲಿನ್,ತನ್ನಾ ರಗಾತ್ ಜಾತಲೆ ಬಂದ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:44
15 ತಿಳಿವುಗಳ ಹೋಲಿಕೆ  

ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು.


ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಆ ಸ್ಥಳದಲ್ಲಿ ಇದ್ದ ಜನರ ಗುಂಪಿನ ಮಧ್ಯದಲ್ಲಿ ಮರೆಯಾದನು.


ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.


ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.


ಆತನು ಯಾವ ಗ್ರಾಮಗಳಿಗೆ, ಯಾವ ಊರು ಹಳ್ಳಿಗಳಿಗೆ ಹೋದರೂ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು, ಆತನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.


ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.


ಆತನು ಕೈಚಾಚಿ ಆತನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.


ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.


ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.


ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು,


ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.


ಆಗ ಯೇಸುವು, “ನನ್ನನ್ನು ಮುಟ್ಟಿದವರಾರು?” ಎಂದು ಕೇಳಲು ಎಲ್ಲರೂ, ನಾನಲ್ಲ, ನಾನಲ್ಲ ಅನ್ನಲು ಪೇತ್ರನು, “ಗುರುವೇ, ಎಷ್ಟೋ ಜನರು ನಿನ್ನನ್ನು ಮೈಮೇಲೆ ಬೀಳುತ್ತಾ ನೂಕುತ್ತಿದ್ದಾರಲ್ಲಾ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು