Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಹನ್ನೆರಡು ಮಂದಿ ಪ್ರೇಷಿತರನ್ನು ಒಟ್ಟಿಗೆ ಕರೆದು ಎಲ್ಲ ದೆವ್ವಗಳನ್ನು ಬಿಡಿಸಲೂ ರೋಗ ನಿವಾರಣೆಮಾಡಲೂ ಅವರಿಗೆ‍ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಅಧಿಕಾರಗಳನ್ನು ಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ಒಟ್ಟಾಗಿ ಕರೆದು ಅವರಿಗೆ ಕಾಯಿಲೆಗಳನ್ನು ವಾಸಿಮಾಡುವ ಶಕ್ತಿಯನ್ನೂ ದೆವ್ವಗಳ ಮೇಲೆ ಅಧಿಕಾರವನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ಎಲ್ಲಾ ದೆವ್ವಗಳನ್ನು ಓಡಿಸುವುದಕ್ಕೂ ರೋಗಗಳನ್ನು ಸ್ವಸ್ಥಮಾಡುವುದಕ್ಕೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ಬಾರಾ ಶಿಸಾಕ್ನಿ ಎಕಾಕ್ಡೆ ಬಲ್ವುಲ್ಯಾನ್ ಅನಿ ಗಿರೆ ಕಾಡ್ತಲೊ ಅದಿಕಾರ್ ಅನಿ ಬಳ್ ತೆಂಕಾ ದಿಲ್ಯಾನ್, ಅನಿ ರೊಗಾ ಗುನ್ ಕರ್‍ತಲೊಬಿ ಬಳ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:1
15 ತಿಳಿವುಗಳ ಹೋಲಿಕೆ  

“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.


ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.


ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ಪೇತ್ರನು ಅವನಿಗೆ, “ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ” ಎಂದು ಹೇಳಿದನು. ಕೂಡಲೆ ಅವನು ಎದ್ದನು.


ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.


ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು.


ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು