Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖವಾಗಿ ಹೊರಡಲು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಯೇಸು ತಾನು ಪರಲೋಕವನ್ನೇರುವ ದಿವಸಗಳು ತುಂಬುತ್ತಾ ಬರುವಾಗ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸನ್ನು ದೃಢಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಯೇಸು ಮತ್ತೆ ಪರಲೋಕಕ್ಕೆ ಹಿಂತಿರುಗುವ ಸಮಯ ಹತ್ತಿರವಾಗುತ್ತಿತ್ತು. ಆದ್ದರಿಂದ ಆತನು ಜೆರುಸಲೇಮಿಗೆ ಹೋಗಲು ತೀರ್ಮಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಯೇಸು ತಾವು ಸ್ವರ್ಗಕ್ಕೆ ಏರಿಹೋಗುವ ಕಾಲ ಬಂದಾಗ, ಯೆರೂಸಲೇಮಿಗೆ ಹೋಗುವುದಕ್ಕಾಗಿ ತಮ್ಮ ಮನಸ್ಸನ್ನು ದೃಢಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಜೆಜುಕ್ ಸರ್‍ಗಾಕ್ ಘೆವ್ನ್ ಜಾತಲೊ ಎಳ್ ಜಗ್ಗೊಳ್-ಯೆವ್ನ್ಗೆತ್ ಹೊತ್ತೊ, ಜೆಜುನ್ ಅಪ್ನಾಚೆ ಮನ್ ಘಟ್ ಕರುನ್ ಘೆಟ್ಲ್ಯಾನ್, ಅನಿ ತೊ ಅಪ್ಲಿ ವಾಟ್ ಧರುನ್ ಜೆರುಜಲೆಮಾಕ್ ಜಾವ್‍ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:51
29 ತಿಳಿವುಗಳ ಹೋಲಿಕೆ  

ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.


ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು.


ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.


ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ


ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.


ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.


ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.


ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು.


“ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ.


ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.


ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?


ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು.


ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇಮಿಗೆ ಮುಂದಾಗಿ ಹೋದನು.


ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು.


ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.


ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು.


ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.


ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು