Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮಣ್ಣು ಅಗೆಯುವ ಕೆಲಸದಲ್ಲೂ ಇಟ್ಟಿಗೆ ಸುಡುವ ಕೆಲಸದಲ್ಲೂ ವ್ಯವಸಾಯದ ಮತ್ತಿತರ ಕೆಲಸಕಾರ್ಯಗಳಲ್ಲೂ ಕಠಿಣವಾಗಿ ಅವರಿಂದ ದುಡಿಸಿಕೊಂಡರು. ಅವರು ಮಾಡಿಸಿಕೊಳ್ಳುತ್ತಿದ್ದ ಪ್ರತಿಯೊಂದು ಕೆಲಸವು ಜೀವನವೇ ಬೇಡವೆನ್ನುವಷ್ಟು ಕಠೋರವಾಗಿ ಇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಮಾಡುವ ಕೆಲಸದಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಗಳನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿಸಿದ ಎಲ್ಲಾ ಸೇವೆಯೂ ಬಹುಕಠೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈಜಿಪ್ಟಿನವರು ಇಸ್ರೇಲರ ಜೀವಿತವನ್ನು ಕಷ್ಟಕರವನ್ನಾಗಿ ಮಾಡಿದರು. ಇಸ್ರೇಲರಿಂದ ಇಟ್ಟಿಗೆ, ಗಾರೆ, ಬೇಸಾಯ ಮತ್ತು ಪ್ರತಿಯೊಂದು ಕೆಲಸವನ್ನು ಬಲವಂತವಾಗಿ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮಣ್ಣು ಅಗೆಯುವ, ಇಟ್ಟಿಗೆಯನ್ನು ಮಾಡುವ ಮತ್ತು ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಈಜಿಪ್ಟಿನವರು ಅವರಿಂದ ಮಾಡಿಸಿದ ಎಲ್ಲಾ ಕೆಲಸವು ಕಠೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:14
30 ತಿಳಿವುಗಳ ಹೋಲಿಕೆ  

ಈ ಅರಸನು ನಮ್ಮ ಪೂರ್ವಿಕರ ವಿರುದ್ಧವಾಗಿ ಕುಯುಕ್ತಿಯನ್ನು ಯೋಚಿಸಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ, ನಮ್ಮ ಪೂರ್ವಿಕರನ್ನು ಕ್ರೂರವಾಗಿ ಹಿಂಸಿಸಿಸನು.


ನಮ್ಮ ಪೂರ್ವಿಕರು ಐಗುಪ್ತ ದೇಶಕ್ಕೆ ಇಳಿದು ಹೋದರು. ಅವರು ಅಲ್ಲಿ ಬಹುದಿನ ವಾಸವಾಗಿದ್ದರು. ಐಗುಪ್ತ್ಯರು ನಮ್ಮನ್ನೂ ಮತ್ತು ನಮ್ಮ ಪೂರ್ವಿಕರನ್ನೂ ಉಪದ್ರವಪಡಿಸಿದ್ದರು.


ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ.


ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು.


ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,


“ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.


ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿಟ್ಟುಕೋ, ನಿನ್ನ ಕೋಟೆಗಳನ್ನು ಬಲಪಡಿಸಿಕೋ; ಮಣ್ಣಿಗೆ ಇಳಿ, ಜೇಡಿಮಣ್ಣನ್ನು ತುಳಿ, ಇಟ್ಟಿಗೆಯ ಅಚ್ಚನ್ನು ಹಿಡಿ.


ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ. ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.


ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ ನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ. ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ.


ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು. ಅವರು ನಿನಗೆ, ‘ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು’ ಎಂದು ಹೇಳಲು, ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ, ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡೆಯಲ್ಲಾ.”


ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.


ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವುದೇನು? ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.


ಆಕೆಯು ಅವರಿಗೆ, “ನನ್ನನ್ನು ನವೊಮಿಯೆಂದು ಕರೆಯಬೇಡಿರಿ; ನನ್ನನ್ನು ‘ಮಾರಾ’ (ಕಹಿ) ಎಂದು ಕರೆಯಿರಿ. ಏಕೆಂದರೆ, ಸರ್ವಶಕ್ತನಾದ ದೇವರು ಬಹಳ ತೀಕ್ಷ್ಣವಾಗಿ ನನ್ನ ಜೀವಿತವನ್ನು ಮಾರ್ಪಡಿಸಿದ್ದಾನೆ.


ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.


ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.


ಅವನು ವರ್ಷವರ್ಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು.


ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು.


ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು.


ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.


ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.


ಇದಲ್ಲದೆ ಐಗುಪ್ತ ದೇಶದ ಅರಸನು “ಶಿಪ್ರಾ” ಮತ್ತು “ಪೂಗಾ” ಎಂಬ ಹೆಸರಿನ ಇಬ್ರಿಯ ಸೂಲಗಿತ್ತಿಯರೊಂದಿಗೆ ಮಾತನಾಡಿದನು.


“ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.


ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.


“ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” ಎಂದು ಇಸ್ರಾಯೇಲರು ಹೇಳಲಿ.


ಆದುದರಿಂದ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಹೀಗೆ ಹೇಳುತ್ತಾನೆ, “ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಐಗುಪ್ತರು ಮಾಡಿದಂತೆ, ನಿಮ್ಮನ್ನು ಕೋಲಿನಿಂದ ಹೊಡೆದು, ನಿಮ್ಮ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು