Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ಆ ಸೂಲಗಿತ್ತಿಯರು ದೈವಭಕ್ತರು. ಈಜಿಪ್ಟಿನ ಅರಸ ಹೇಳಿದಂತೆ ಮಾಡದೆ ಗಂಡುಮಕ್ಕಳನ್ನು ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ಸೂಲಗಿತ್ತಿಯರು ದೇವರಿಗೆ ಭಯಪಡುವವರಾದದರಿಂದ ಐಗುಪ್ತ್ಯರ ಅರಸನ ಮಾತಿನಂತೆ ಮಾಡದೆ ಗಂಡುಮಕ್ಕಳನ್ನೂ ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಈಜಿಪ್ಟಿನ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:17
22 ತಿಳಿವುಗಳ ಹೋಲಿಕೆ  

ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.


ಸೂಲಗಿತ್ತಿಯರು ದೇವರಿಗೆ ಭಯಪಟ್ಟಿದ್ದರಿಂದ, ಆತನು ಅವರಿಗೆ ವಂಶಾಭಿವೃದ್ಧಿಯನ್ನು ಅನುಗ್ರಹಿಸಿದನು. ಇಸ್ರಾಯೇಲರು ಹೆಚ್ಚಿ ಬಲಗೊಂಡರು.


ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.


ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.


ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.


ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.


ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ, ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.


ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.


ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ, ಅದು ದೇವರ ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.


ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.”


ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.


ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ?” ಎಂದು ಕೇಳಿದನು.


ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.


ಆದರೆ ಅರಸನು ಯೋವಾಬನಿಗೂ ಇತರ ಸೇನಾಧಿಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ ಅವರು ಇಸ್ರಾಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.


ಅರಮನೆಯ ದ್ವಾರಪಾಲಕರು ಮೊರ್ದೆಕೈಗೆ, “ನೀನು ರಾಜಾಜ್ಞೆಯನ್ನು ಮೀರುವುದೇಕೆ?” ಎಂದು ಪ್ರತಿದಿನ ಅವನನ್ನು ಎಚ್ಚರಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು